KARNATAKA
ಮುಂದಿನ ಆದೇಶ ಬರುವವರೆಗೂ ಕಾಲೇಜಿಗೆ ಯಾರೂ ಸಹ ಹಿಜಬ್ ಮತ್ತು ಕೇಸರಿ ಶಾಲನ್ನು ಧರಿಸಿ ಹೋಗುವಂತಿಲ್ಲ – ಹೈಕೋರ್ಟ್
ಬೆಂಗಳೂರು : ದೇಶದಾದ್ಯಂತ ಭಾರೀ ವಿವಾದ ಎಬ್ಬಿಸಿರುವ ಹಿಜಬ್ ಮತ್ತು ಕೇಸರಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕರ್ನಾಟರ ಹೈಕೋರ್ಟ್ ಮೌಖಿಕ ಆದೇಶ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಬರುವವರೆಗೂ ವಿದ್ಯಾರ್ಥಿಗಳು ಯಾವುದೇ ರೀತಿಯ ಹಿಜಬ್ ಅಥವಾ ಕೇಸರಿ ಶಾಲು ಧರಿಸಿ ಕಾಲೇಜಿಗೆ ಬರುವಂತಿಲ್ಲ ಎಂದು ತಿಳಿಸಿದೆ.
ಕಾಲೇಜುಗಳಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾ. ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಒಳಗೊಂಡ ತ್ರಿಸದ್ಯ ಪೀಠದಲ್ಲಿ ನಡೆಯಿತು.
ಮುಂದಿನ ಆದೇಶ ಬರುವವರೆಗೂ ಕಾಲೇಜಿಗೆ ಯಾರೂ ಸಹ ಹಿಜಬ್ ಮತ್ತು ಕೇಸರಿ ಶಾಲನ್ನು ಧರಿಸಿ ಹೋಗುವಂತಿಲ್ಲ. ಕಾಲೇಜು ನಡೆಯಲೇಬೇಕು. ಹೀಗಾಗಿ ಮಧ್ಯಂತರ ಆದೇಶ ನೀಡಿದ್ದೇವೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಮುಂದಿನ ಆದೇಶ ಬರುವವರೆಗೂ ವಿದ್ಯಾರ್ಥಿಗಳು ಯಾರೂ ಸಹ ಧಾರ್ಮಿಕ ಬಟ್ಟೆ ಧರಿಸಿ ಕಾಲೇಜಿಗೆ ಹೋಗುವಂತಿಲ್ಲ. ಶಾಂತಿ, ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.
You must be logged in to post a comment Login