Connect with us

    LATEST NEWS

    ಉಡುಪಿ ಜಿಲ್ಲೆಯಲ್ಲೂ ವಾರಾಂತ್ಯ ಕರ್ಪ್ಯೂ ರದ್ದು – ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ

    ಉಡುಪಿ ಸೆಪ್ಟೆಂಬರ್ 10: ರಾಜ್ಯ ಸರಕಾರ ಈಗಾಗಲೇ ವಿಕೇಂಡ್ ಕರ್ಪ್ಯೂವನ್ನು ರಾಜ್ಯಾದ್ಯಂತ ರದ್ದುಪಡಿಸಿದ್ದು, ಇದೀಗ ಉಡುಪಿ ಜಿಲ್ಲಾಡಳಿತ ತಕ್ಷಣ ಜಾರಿಗೆ ಬರುವಂತೆ ವಿಕೇಂಡ್ ಕರ್ಪ್ಯೂವನ್ನು ರದ್ದು ಪಡಿಸಿದ್ದಾರೆ.


    ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಕೂರ್ಮರಾವ್ ವಾರಂತ್ಯ ಕರ್ಫ್ಯೂ ಬಗ್ಗೆ ಸರಕಾರದಿಂದ ನಿರ್ದೇಶನ ಬಂದಿದೆ. ಅಲ್ಲದೆ ಜಿಲ್ಲಾಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲು ಸೂಚಿಸಿದ್ದಾರೆ. ಈ ಹಿನ್ನಲೆ ಜಿಲ್ಲೆಯಲ್ಲಿ ತಜ್ಞರ ಸಮಿತಿ ಸಭೆ ಮಾಡಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ವಾರಾಂತ್ಯ ಕರ್ಪ್ಯೂ ಹಿಂಪಡೆಯಲಾಗಿದೆ ಎಂದರು. ಇನ್ನು ಉಳಿದಂತೆ ಎಲ್ಲಾ ನಿರ್ಬಂಧಗಳು ಹಿಂದಿನಂತೆಯೇ ಮುಂದುವರೆಯುತ್ತದೆ. ರಾತ್ರಿ ಕರ್ಪ್ಯೂ ಎಂದಿನಂತೆ ರಾತ್ರಿ 9 ರಿಂದ ಬೆಳಿಗ್ಗೆ 5 ರವರೆಗೆ ಮುಂದುವರೆಯಲಿದೆ.

    18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕೊರೋನಾ ಲಸಿಕೆ ಪಡೆಯಿರಿ ಜಿಲ್ಲಾಧಿಕಾರಿ ಕೂರ್ಮರಾವ್ ಸೂಚನೆ ನೀಡಿದರು.

    Share Information
    Advertisement
    Click to comment

    You must be logged in to post a comment Login

    Leave a Reply