LATEST NEWS
ನೋಬಾಲ್ ನೀಡಿದ್ದಕ್ಕೆ ಅಂಪೈರ್ ನ ಕೊಲೆ…!!
ಒಡಿಶಾ ಎಪ್ರಿಲ್ 03: ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ನೋ ಬಾಲ್ ನೀಡಿದ್ದಕ್ಕೆ ಅಂಪೈರ್ ನ್ನೆ ಕೊಲೆ ಮಾಡಿದ ಘಟನೆ ಒಡಿಶಾದ ಚೌದ್ವಾರ್ ಪೊಲೀಸ್ ವ್ಯಾಪ್ತಿಯ ಕಟಕ್ ಜಿಲ್ಲೆಯ ಮಹಿಸಲಂದ ಎಂಬಲ್ಲಿ ನಡೆದಿದೆ. ಮೃತರನ್ನು ಮಹಿಳಂದದ ಲಕ್ಕಿ ರೌವುತ್ (22) ಎಂದು ಗುರುತಿಸಲಾಗಿದೆ. ಚಾಕುವಿನಿಂದ ಇರಿದು ಕೊಲೆಗೈದ ಆರೋಪಿ ಮುನಾ ರೌತ್ ತಲೆಮರೆಸಿಕೊಂಡಿದ್ದಾನೆ.
ಈ ಪಂದ್ಯಕ್ಕೆ ಲಕ್ಕಿ ರಾವುತ್( 22) ತೀರ್ಪುಗಾರನಾಗಿ ನಿಂತಿದ್ದರು. ಪಂದ್ಯ ನಡೆಯುತ್ತಿದ್ದ ವೇಳೆ ಎಸೆತವೊಂದಕ್ಕೆ ನೋ ಬಾಲ್ ಎಂದು ಅಂಪೈರ್ ತೀರ್ಪು ನೀಡಿದ್ದಾರೆ. ಈ ವೇಳೆ ಇದು ನೋ ಬಾಲ್ ಅಲ್ಲ ಎಂದು ಸ್ಮೃತಿ ರಂಜನ್ ರೌತ್ ಎಂಬಾತ ಅಂಪೈರ್ ನೊಂದಿಗೆ ವಾದಕ್ಕೆ ಇಳಿದಿದ್ದಾನೆ.
ಇನ್ನು ವಾದ ಜಗಳಕ್ಕೆ ತಿರುಗಿ ಚೂರಿಯಿಂದ ತೀರ್ಪುಗಾರನಾಗಿ ನಿಂತಿದ್ದ ಲಕ್ಕಿ ರಾವುತ್ ಗೆ ಇರಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಲಕ್ಕಿ ರಾವುತ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸುವಾಗಲೇ ಆತ ಮೃತಪಟ್ಟಿದ್ದಾನೆ ಎಂದು ವರದಿ ತಿಳಿಸಿದೆ.
ಆರೋಪಿಯನ್ನು ಜನ ಪೊಲೀಸರಿಗೆ ಒಪ್ಪಿಸಿದ್ದು, ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
You must be logged in to post a comment Login