LATEST NEWS
ಎಪ್ರಿಲ್ 3 ವರೆಗೆ ಕರ್ನಾಟಕದಲ್ಲಿ ಸಾಧಾರಣ ಮಳೆ ಸಾಧ್ಯತೆ – ಹವಮಾನ ಇಲಾಖೆ

ಮಂಗಳೂರು ಮಾರ್ಚ್ 28: ಕರ್ನಾಟಕದಲ್ಲಿ ಈಗ ಒಂದು ಕಡೆ ಮಳೆ ಮತ್ತೊಂದು ಕಡೆ ಬಿಸಿಲಿನ ಆರ್ಭಟ ಜೋರಾಗಿದೆ. ಈ ನಡುವೆ ಎಪ್ರಿಲ್ 3 ರವರೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ತುಮಕೂರು, ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಗದಗ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿಯಲ್ಲಿ ಒಣಹವೆ ಇರಲಿದೆ.
