LATEST NEWS
ಕೇರಳದಿಂದ ಮಂಗಳೂರಿಗೆ ಆಗಮಿಸಿದ್ದ 15 ನರ್ಸಿಂಗ್ ವಿಧ್ಯಾರ್ಥಿಗಳಿಗೆ ಕೊರೊನಾ ಸೊಂಕು
ಮಂಗಳೂರು: ಜನವರಿ 1 ರಿಂದ ಕಾಲೇಜುಗಳು ಆರಂಭದ ಹಿನ್ನಲೆ ಕೇರಳದಿಂದ ಮಂಗಳೂರಿಗೆ ಆಗಮಿಸಿದ್ದ ನರ್ಸಿಂಗ್ ವಿಧ್ಯಾರ್ಥಿಗಳಲ್ಲಿ 15 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ.
ಈಗಾಗಲೇ ರಾಜ್ಯ ಸರಕಾರ ಜನವರಿ 1ರಿಂದ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನಲೆ ಕೇರಳದಿಂದ 613 ವಿದ್ಯಾರ್ಥಿಗಳು ಮಂಗಳೂರಿನ ಸಿಟಿ ನರ್ಸಿಂಗ್ ಕಾಲೇಜು ಮತ್ತು ರುಕ್ಮಿಣಿ ಶೆಟ್ಟಿ ಮೆಮೋರಿಯಲ್ ನರ್ಸಿಂಗ್ ಕಾಲೇಜಿಗೆ ಆಗಮಿಸಿದ್ದರು. ಇದರಲ್ಲಿ 15 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಕೇರಳದಿಂದ ಬಂದಿದ್ದ 613 ವಿದ್ಯಾರ್ಥಿಗಳ ಪೈಕಿ 200 ವಿದ್ಯಾರ್ಥಿಗಳು ಮಾತ್ರ ಕೊರೊನಾ ಟೆಸ್ಟ್ ಮಾಡಿಸಿ ನೆಗೆಟಿವ್ ವರದಿ ತಂದಿದ್ದರು. 613 ವಿದ್ಯಾರ್ಥಿಗಳ ಪೈಕಿ ಕೊರೊನಾ ವರದಿ ಇಲ್ಲದೆ ಬಂದಿದ್ದ ವಿದ್ಯಾರ್ಥಿಗಳನ್ನು ಆರೋಗ್ಯ ಇಲಾಖೆ ಕೊರೊನಾ ಟೆಸ್ಟ್ ಮಾಡಿಸಿದೆ. ಈ ವೇಳೆ 15 ಮಂದಿ ಕೇರಳ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಇರುವುದು ಬೆಳಕಿಗೆ ಬಂದಿದೆ. ಕೊರೊನಾ ಪಾಸಿಟಿವ್ ವರದಿಯಾದ 15 ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಲ್ಲಿ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಸರ್ಕಾರದ ನಿಯಮ ಪಾಲಿಸದೆ ಬಂದಿದ್ದ ಎಲ್ಲಾ ವಿದ್ಯಾರ್ಥಿಗಳನ್ನು ಕಾಲೇಜಿಗೆ ಸೇರಿಸಿಕೊಂಡ ಮಂಗಳೂರಿನ ಸಿಟಿ ನರ್ಸಿಂಗ್ ಕಾಲೇಜು ಮತ್ತು ರುಕ್ಮಿಣಿ ಶೆಟ್ಟಿ ಮೆಮೋರಿಯಲ್ ನರ್ಸಿಂಗ್ ಕಾಲೇಜಿಗೆ ಸರ್ಕಾರದಿಂದ ಶೋಕಾಸ್ ನೋಟಿಸ್ ನೀಡಲಾಗಿದೆ.
ಈ ಘಟನೆಯ ಬೆನ್ನಲ್ಲೇ ಜಿಲ್ಲೆಯ ಎಲ್ಲಾ ನರ್ಸಿಂಗ್ ಕಾಲೇಜುಗಳಿಗೆ ಆರೋಗ್ಯ ಇಲಾಖೆ ನೋಟೀಸ್ ಜಾರಿ ಮಾಡಿದ್ದು, ತರಗತಿಗೆ ಆರಂಭದ 72 ಗಂಟೆಗೂ ಮುನ್ನ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ಕೊರೊನಾ ಟೆಸ್ಟ್ ಮಾಡಿಸಿ ನೆಗೆಟಿವ್ ವರದಿ ಸಲ್ಲಿಸುವಂತೆ ಸೂಚನೆ ಹೊರಡಿಸಿದೆ. ಸರ್ಕಾರದ ನಿಯಮ ಪಾಲನೆ ಮಾಡದಿದ್ದರೆ ಅಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುದಾಗಿ ಎಚ್ಚರಿಕೆ ನೀಡಿದೆ.
You must be logged in to post a comment Login