Connect with us

LATEST NEWS

ಮಂಗಳೂರು – ಹಿಂದೂ ಮುಖಂಡನ ಮೊಬೈಲ್ ನಲ್ಲಿ 50ಕ್ಕೂ ಅಧಿಕ ಅಶ್ಲೀಲ ವಿಡಿಯೋ

ಮಂಗಳೂರು, ಜುಲೈ 05: ಇತ್ತೀಚೆಗೆ ಖಾಸಗಿ ಬಸ್ ಅಪಘಾತದ ವೇಳೆ ನಡೆದ ಗಲಾಟೆ ವೇಳೆ ಬಸ್ ಮಾಲೀಕನಿಂದ ಅಕ್ರಮವಾಗಿ ಹಣ ವಸೂಲಿ ಮಾಡಿದ್ದಾರೆ ಆರೋಪದ ಮೇಲೆ ಪೊಲೀಸರಿಂದ ಅರೆಸ್ಟ್ ಆಗಿದ್ದ ಹಿಂದೂ ಮುಖಂಡ ಸಮಿತ್ ರಾಜ್ ಧರೆಗುಡ್ಡೆ ಅವರ ಮೊಬೈಲ್ ನಲ್ಲಿ 50ಕ್ಕೂ ಅಧಿಕ ಅಶ್ಲೀಲ ವಿಡಿಯೋ ಪತ್ತೆಯಾಗಿದೆ. ಈ ಕುರಿತಂತೆ ಮೂಡಬಿದಿರೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.


2024ರಲ್ಲಿ ಮೂಡುಬಿದಿರೆ ತಾಲೂಕಿನ ಮಿಜಾರು ಬಳಿಯ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ನಡೆದಿದ್ದ ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಸುಮಿತ್ರಾ ಮತ್ತು ಅವರ ಪುತ್ರಿ ಸಾನ್ವಿ ಅವರಿಗೆ ಬಸ್ ಮಾಲಕನಿಗೆ ಒತ್ತಡ ಹಾಕಿ ಸಮಿತ್ ರಾಜ್ 5 ಲಕ್ಷ ರೂ. ಪರಿಹಾರ ತೆಗೆಸಿಕೊಟ್ಟಿದ್ದ ಎನ್ನಲಾಗಿದೆ.

ಇದೇ ವಿಚಾರವಾಗಿ ಖಾಸಗಿ ಬಸ್ ಮಾಲಕ ಸಮಿತ್ ರಾಜ್ ವಿರುದ್ಧ ಬೆದರಿಕೆ ಮತ್ತು ಅಕ್ರಮ ಹಣ ವಸೂಲಿ ಮಾಡಿರುವ ಆರೋಪದಲ್ಲಿ 2024ರಲ್ಲಿ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇತ್ತೀಚಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಈ ಪ್ರಕರಣದ ವಿಚಾರಣೆ ನಡೆಸುವಂತೆ ಮೂಡುಬಿದಿರೆ ಪೊಲೀಸರಿಗೆ ಸೂಚಿಸಿದ್ದರು. ಅದರಂತೆ ಪ್ರಕರಣದ ಆರೋಪಿ ಸಮೀತ್ ರಾಜ್ ಧರೆಗುಡ್ಡೆಯನ್ನು ಬಂಧಿಸಿ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಜೂ.26ರಂದು ಠಾಣೆಗೆ ಕರೆ ತಂದಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಸಮಿತ್‌ರಾಜ್‌ನ ಮೊಬೈಲ್ ಫೋನನ್ನು ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಸೆನ್ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಈ ವೇಳೆ ಮೊಬೈಲ್‌ನ ದತ್ತಾಂಶಗಳನ್ನು ರಿಟ್ರೈವ್ ಮಾಡಿದಾಗ ಆರೋಪಿ ಸುಮಿತ್‌ರಾಜ್ ಮಹಿಳೆಯೊಂದಿಗಿನ ಅಶ್ಲೀಲ ವೀಡಿಯೊಗಳು ಮತ್ತು ವೆಬ್‌ಸೈಟ್‌ಗಳಿಂದ ಡೌನ್‌ಲೋಡ್ ಮಾಡಲಾಗಿದ್ದ ಸುಮಾರು 40ರಿಂದ 50 ಅಶ್ಲೀಲ ವೀಡಿಯೊಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಡಿಯೋಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಸಂದೇಶ್​ರಿಂದ ದೂರು ನೀಡಲಾಗಿದ್ದು, ಮೂಡಬಿದಿರೆ ಠಾಣೆಯಲ್ಲಿಈ ಸಂಬಂಧ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ವಿಡಿಯೋ ತುಣುಕುಗಳನ್ನು ಪ್ರಸಾರ ಮಾಡುವ, ಬೇರೆಯವರಿಗೆ ಕಳುಹಿಸುವ ಅಥವಾ ಸಾಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಸಾಧ್ಯತೆ ಹಿನ್ನೆಲೆ ಎಫ್ಐಆರ್ ದಾಖಲಿಸಲಾಗಿದೆ. ಸದ್ಯ ಮೂಡಬಿದಿರೆ ಪೊಲೀಸರು ವಿಡಿಯೋದ ಮೂಲ ಪತ್ತೆ ಹಚ್ಚಲು ಮುಂದಾಗಿದ್ದು, ಇತ್ತ ಈ ಬಗ್ಗೆ ವಿಚಾರಣೆ ನಡೆಸಲು ಸಮಿತ್ ರಾಜ್​ಗೆ ನೋಟೀಸ್ ನೀಡಲು ಸಿದ್ದತೆ ನಡೆಸಿದ್ದಾರೆ. ಬಸ್​ಗೆ ಕಲ್ಲು ತೂರಿದ ಕೇಸ್ ನಲ್ಲಿ ಸಮಿತ್ ರಾಜ್ ಜಾಮೀನು ಪಡೆದು ಬಿಡುಗಡೆಗೊಂಡಿದ್ದಾರೆ. ಹಾಗಾಗಿ ಮತ್ತೆ ನೋಟೀಸ್ ಕೊಟ್ಟು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ

Share Information
Continue Reading
Advertisement
Click to comment

Leave a Reply

Your email address will not be published. Required fields are marked *