Connect with us

    LATEST NEWS

    ಅಕ್ರಮ ಬಾಕ್ಸೈಟ್ ಗಣಿಗಾರಿಕೆ ವಿರುದ್ದ ಕ್ರಮ – ಮಂಗಳೂರು ಉಪವಿಭಾಗಾಧಿಕಾರಿ ಮದನ್‌ ಮೋಹನ್‌ ಹಠಾತ್‌ ವರ್ಗಾವಣೆ

    ಮಂಗಳೂರು ಅಕ್ಟೋಬರ್ 14: ಅಕ್ರಮ ಬಾಕ್ಸೈಟ್ ಗಣಿಗಾರಿಕೆ ವಿರುದ್ದ ಕಠಿಣ ಕ್ರಮ ತೆಗೆದುಕೊಂಡಿದ್ದ ಮಂಗಳೂರು ಉಪವಿಭಾಗ ಉಪವಿಭಾಗಾಧಿಕಾರಿ ಮದನ್‌ ಮೋಹನ್‌ ಸಿ. ಅವರನ್ನು ಹಠಾತ್‌ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಅಕ್ರಮ ಬಾಕ್ಸೈಟ್ ಗಣಿಗಾರಿಕೆಯಲ್ಲಿ ಪ್ರಭಾವಿಗಳ ಕೈವಾಡ ಇರುವುದು ಗೋಚರಿಸುತ್ತಿದೆ. ಸದ್ಯ ಮದನ್‌ ಮೋಹನ್‌ ಅವರ ಸ್ಥಾನಕ್ಕೆ ಮಂಗಳೂರು ಸ್ಮಾರ್ಟ್‌ ಸಿಟಿ ಜಂಟಿ ವ್ಯವಸ್ಥಾಪಕ ನಿರ್ದೇಶಕ ರವಿಚಂದ್ರ ನಾಯಕ್‌ ಅವರನ್ನು ನಿಯುಕ್ತಿಗೊಳಿಸಲಾಗಿದೆ.


    ಈ ಕುರಿತಂತೆ ಆದೇಶ ಹೊರಡಿಸಿರುವ ರಾಜ್ಯ ಸರಕಾರ ಕರ್ನಾಟಕ ಆಡಳಿತ ನ್ಯಾಯಮಂಡಳಿ ಹೊರಡಿಸಿದ ಆದೇಶವನ್ನು ಜಾರಿಗೆ ತರುವ ಉದ್ದೇಶದಿಂದ ಈ ಆದೇಶ ಹೊರಡಿಸಲಾಗಿದೆ ಎಂದು ತನ್ನ ಆದೇಶದಲ್ಲಿ ತಿಳಿಸಿದೆ.
    ಇತ್ತೀಚೆಗೆ ಮದನ್ ಮೋಹನ್ ನೇತೃತ್ವದ ಅಧಿಕಾರಿಗಳ ತಂಡ ನಗರದಲ್ಲಿನ ಅಕ್ರಮ ಬಾಕ್ಸೈಟ್ ಗಣಿಗಾರಿಕೆಯಲ್ಲಿ ತೊಡಗಿದ್ದ ಲಾರಿಗಳು ಸೇರಿದಂತೆ 30 ವಾಹನಗಳನ್ನು ವಶಪಡಿಸಿಕೊಂಡಿತ್ತು.


    ಇದು ಈ ಚಟುವಟಿಕೆಯಲ್ಲಿ ಭಾಗಿಯಾಗಿರುವ ಪ್ರಭಾವಿ ವ್ಯಕ್ತಿಗಳು ಈ ದಾಳಿಯಿಂದಾಗಿ ಕೋಪಗೊಂಡಿದ್ದರು. ಬಳಿಕ ಈ ಪ್ರಭಾವಿ ವ್ಯಕ್ತಿಗಳಿಂದ ಮದನ್‌ ಮೋಹನ್‌ ಅವರನ್ನು ವರ್ಗಾವಣೆ ಮಾಡುವಂತಹ ಪ್ರಯತ್ನಗಳು ಕೂಡಾ ನಡೆದಿದ್ದವು ಎಂದು ಹೇಳಲಾಗಿದೆ. ಅವರನ್ನು ಯಾವ ಸಂದರ್ಭದಲ್ಲೂ ವರ್ಗಾಯಿಸುವ ಸಾಧ್ಯತೆಯಿದೆ ಎಂಬ ಊಹಾಪೋಹಗಳು ಇದ್ದವು. ಬಾಕ್ಸೈಟ್‌ ಲಾಬಿಗೆ ಸರ್ಕಾರ ಮಣಿದಿದೆಯೇ ಎಂದು ಶಂಕೆ ವ್ಯಕ್ತವಾಗಿದೆ

    Share Information
    Advertisement
    Click to comment

    You must be logged in to post a comment Login

    Leave a Reply