DAKSHINA KANNADA
ಪುತ್ತೂರು – ನೇಣಿಗೆ ಶರಣಾದ ವೃದ್ದ ದಂಪತಿಗಳು
ಪುತ್ತೂರು ಅಕ್ಟೋಬರ್ 18: ವೃದ್ದ ದಂಪತಿಗಳು ನೇಣಿಗೆ ಶರಣಾದ ಘಟನೆ ಬಡಗನ್ನೂರು ಗ್ರಾಮದ ಪಾದೆಕರ್ಯ ಎಂಬಲ್ಲಿ ನಡೆದಿದೆ. ಮೃತ ದಂಪತಿಗಳನ್ನು ಸುಬ್ರಹ್ಮಣ್ಯ ಭಟ್(65), ಶಾರದಾ(60) ಎಂದು ಗುರುತಿಸಲಾಗಿದೆ.
ಪಾದೆಕರ್ಯ ಕೃಷಿಕರಾಗಿರುವ ಸುಬ್ರಹ್ಮಣ್ಯ ಭಟ್ ದಂಪತಿ ಅವರು ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರೂ ಭಾನುವಾರ ರಾತ್ರಿ ಊಟ ಮಾಡಿ ಮನೆಯ ಕೆಳಗಿನ ಅಂತಸ್ತಿನ ಕೋಣೆಯಲ್ಲಿ ಮಲಗಿದ್ದರು. ಪುತ್ರ, ಅವರ ಪತ್ನಿ ಮತ್ತು ಮಕ್ಕಳು ಮಹಡಿಯ ಕೋಣೆಯಲ್ಲಿ ಮಲಗಿದ್ದರು. ಪುತ್ರ ಸೋಮವಾರ ಬೆಳಿಗ್ಗೆ ಎದ್ದು ನೋಡಿದಾಗ ದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಪ್ಯ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.
You must be logged in to post a comment Login