DAKSHINA KANNADA
ಮಾ.14ರಂದು ಪುತ್ತೂರಿನಲ್ಲಿ ಮೊದಲ ಬಾರಿ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ನಮೋ ಭಾರತದಿಂದ ಶ್ರೇಷ್ಠ ಭಾರತ ಕಾರ್ಯಕ್ರಮ
ಪುತ್ತೂರು: ಭಾರತದ ಇತಿಹಾಸದ ಇತ್ತೀಚಿನ 10 ವರ್ಷಗಳಲ್ಲಿ ಶ್ರೇಷ್ಠ ಭಾರತ ಪೂರಕವಾಗಿ ದೇಶಾದ್ಯಂತ ಯುವ ಸಮುದಾಯದಿಂದ ಪಸರಿಸುವ ನಿಟ್ಟಿನಲ್ಲಿ ಮೊದಲ ಬಾರಿಗೆ ಪುತ್ತೂರು ನಮೋ ಭಾರತ ವತಿಯಿಂದ ಕಾರ್ಯಕ್ರಮವೊಂದನ್ನು ಮಾ.14 ರಂದು ಸಂಜೆ 5 ಗಂಟೆಗೆ ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಹಿಂದಿನ ಗದ್ದೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಮೋ ಭಾರತದ ಕಾರ್ಯಕರ್ತ ರಾಜೇಶ್ ಬನ್ನೂರು ತಿಳಿಸಿದ್ದಾರೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ದೇಶಾದ್ಯಂತ, ರಾಜ್ಯಾದ್ಯಂತ 50 ಕಾರ್ಯಕ್ರಮಗಳನ್ನು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ನಡೆಸಲಾಗಿದೆ. ಪುತ್ತೂರಿನಲ್ಲಿ ನಡೆಯುವ ಕಾರ್ಯಕ್ರಮ 51 ನೇ ಕಾರ್ಯಕ್ರಮವಾಗಿದೆ. ದೇಶದಲ್ಲಿ ಏನು ಆಗ್ತಾ ಇದೆ ಎಂಬುದನ್ನು ಪಸರಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.
ಪುತ್ತೂರಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಯುವ ಸಮುದಾಯದ ಜತೆ ಅದರಲ್ಲೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಅವರು ವಿನಂತಿಸಿದರು.
ಪತ್ರಿಕಾಗೋಷ್ಠಿಯಲ್ಲಿ ನಮೋ ಭಾರತದ ತಾಲೂಕು ಸಂಚಾಲಕ ಶಶಿಧರ ನಾಯಕ್, ಕಾರ್ಯಕರ್ತರಾದ ಅವಿನಾಶ್ ನಾಯ್ಕ್ , ಶೇಖರ್ ಬನ್ನೂರು, ನಿವೇದಿತಾ ಬಾಳಿಗ ಉಪಸ್ಥಿತರಿದ್ದರು.
You must be logged in to post a comment Login