Connect with us

    BANTWAL

    ದೋಣಿ ಮೇಲೆತ್ತುವಾಗ ನೇತ್ರಾವತಿ ನದಿಗೆ ಬಿದ್ದ ಓರ್ವ ನಾಪತ್ತೆ ಮತ್ತಿಬ್ಬರ ರಕ್ಷಣೆ

    ಬಂಟ್ವಾಳ, ಜುಲೈ 03: ದೋಣಿ ಮೇಲೆತ್ತು ಸಂದರ್ಭ ಪ್ರವಾಹದ ರಭಸಕ್ಕೆ ದೋಣಿ ಸಮೇತ ನದಿಗೆ ಬಿದ್ದ ಯುವಕ ನಾಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಅರ್ಕುಳ ಗ್ರಾಮದ ಶಶಿರಾಜ್ ಧಕ್ಕೆಯಲ್ಲಿ ನಿನ್ನೆ ಸಂಜೆ ನಡೆದಿದೆ. ನಾಪತ್ತೆಯಾದ ಯುವಕನನ್ನು ರಾಜು ಸಾಹ್ ಎಂದು ಗುರುತಿಸಲಾಗಿದೆ.

    ಆಸಿಫ್ ಮತ್ತು ಇಸಾಕ್ ಮಾಲಕತ್ವದ ದೋಣಿಯನ್ನು ನಿನ್ನೆ (ಜು.2) ಮಧ್ಯಾಹ್ನ 1 ಗಂಟೆಗೆ ಅರ್ಕುಳ ಗ್ರಾಮದ ಶಶಿರಾಜ್ ಧಕ್ಕೆಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ನಡೆಸುತ್ತಿದ್ದ ಸಮಯದಲ್ಲಿ ಉಪಯೋಗಿಸುತ್ತಿದ್ದ ದೋಣಿಯನ್ನು ನದಿಯಲ್ಲಿ ಭಾರಿ ಪ್ರವಾಹದ ಕಾರಣ ದಡಕ್ಕೆ ಮೇಲೆತ್ತುವಾಗ ಉತ್ತರ ಪ್ರದೇಶ ಮೂಲದವರಾದ ರಾಜು ಸಾಹ್, ಮೊಂತು ಸಾಹ್ ಮತ್ತು ನಾಗೇಂದ್ರ ಕುಮಾರ್ ಸಾಯನಿ ಎಂಬವರುಗಳು ದೋಣಿ ಸಮೇತ ನದಿಯ ನೀರಿನ‌ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ.

    ಕೊಚ್ಚಿ ಹೋದವರಲ್ಲಿ ಮೊಂತು ಸಾಹ್ ಮತ್ತು ನಾಗೇಂದ್ರ ಕುಮಾರ್ ಅಡ್ಯಾರ್- ಪಾವೂರು ಬ್ರಿಡ್ಜಿನ ಅಡಿಯಲ್ಲಿ ಸಿಲುಕಿ ಈಜಿ ದಡ ಸೇರಿದ್ದಾರೆ. ರಾಜು ಸಾಹ್ ಎಂಬಾತ ನೀರಿನ‌ ರಭಸಕ್ಕೆ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದಾನೆ.

    Share Information
    Advertisement
    Click to comment

    You must be logged in to post a comment Login

    Leave a Reply