DAKSHINA KANNADA
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂದೆ ಹಿಂದೂಗಳಿಗೆ ಮಾತ್ರ ಪಾರ್ಕಿಂಗ್ ಅವಕಾಶ
ಪುತ್ತೂರು, ಅಗಸ್ಟ್ 30: ಪುತ್ತೂರಿನ ಇತಿಹಾಸ ಪ್ರಸಿದ್ದ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ ಗದ್ದೆಯಲ್ಲಿ ಇನ್ನು ಮುಂದೆ ಹಿಂದೂ ಭಕ್ತರಿಗೆ ಮಾತ್ರ ಪಾರ್ಕಿಂಗ್ ಮಾಡುವುದಕ್ಕೆ ಮಾತ್ರ ಅವಕಾಶ ಎಂದು ಆದೇಶದ ಫ್ಲೆಕ್ಸ್ ಹಾಕಲಾಗಿದೆ. ಸದ್ಯ ಈ ಆದೇಶ ವಿವಾದ ಸೃಷ್ಟಿ ಮಾಡಿದೆ.
ಈ ಕುರಿತಂತೆ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯು ಪ್ರಕಟಣೆ ಹೊರಡಿಸಿದೆ. ದೇವಾಲಯ ಮುಂಭಾಗದ ವಿಶಾಲವಾದ ದೇವರಮಾರು ಗದ್ದೆಯಲ್ಲಿ ಮುಂದಿನ ದಿನಗಳಲ್ಲಿ ಹಿಂಧೂ ಭಕ್ತರಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.
ಹಿಂದೂ ಭಕ್ತಾಧಿಗಳ ಹೊರತಾಗಿ ಇತರರು ವಾಹನ ಪಾರ್ಕಿಂಗ್ ಮಾಡಿ ಹೋಗುವಂತಿಲ್ಲ. ಇದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಒಂದು ವೇಳೆ ಪಾರ್ಕಿಂಗ್ ಮಾಡಿ ಹೋದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದೆ. ಈ ಆದೇಶ ಫಲಕ ಹಾಕುತ್ತಿದ್ದಂತೆ ಪರ ವಿರೋಧಗಳ ಚರ್ಚೆ ನಡೆಯುತ್ತಿದೆ.
You must be logged in to post a comment Login