Connect with us

DAKSHINA KANNADA

ಇಬ್ಬರ ಬಲಿ ಪಡೆದ ಕಾಡಾನೆ ಸೆರೆಗೆ ಕಾರ್ಯಾಚರಣೆ ಆರಂಭ…!!

ಸುಬ್ರಹ್ಮಣ್ಯ ಫೆಬ್ರವರಿ 21: ನಿನ್ನೆ ಇಬ್ಬರನ್ನು ಬಲಿ ತೆಗೆದುಕೊಂಡ ಕಾಡಾನೆಯನ್ನು ಸೆರೆ ಹಿಡಿಯಲು ಕಾರ್ಯಾಚರಣೆಯನ್ನು ಆರಂಭಿಸಲಾಗಿದ್ದು, ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ‌ 5 ಆನೆಗಳು ಕಡಬ ತಾಲೂಕಿನ ರೆಂಜಿಲಾಡಿಗೆ ಆಗಮಿಸಿದೆ.
ಕಾಡಾನೆ ಸೆರೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು, ಪ್ರಶಾಂತ್, ಹರ್ಷ, ಕಂಜನ್ ಹಾಗೂ ಮಹೇಂದ್ರ ಎಂಬ ಸಾಕಾನೆಗಳು ಕಾರ್ಯಾಚರಣೆಗೆ ಬಂದಿದೆ.


ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಸಮೀಪ ಸೋಮವಾರ ಬೆಳಿಗ್ಗೆ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಕಾಡಾನೆಯನ್ನು ಸೆರೆಹಿಡಿಯಲು ಕಾರ್ಯಾಚರಣೆ ಆರಂಭಿಸಿದೆ.


ಲಾರಿಗಳ ಮೂಲಕ ಆನೆಗಳು ಸೋಮವಾರ ರಾತ್ರಿ ಕಡಬಕ್ಕೆ ಆಗಮಿಸಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳ ತಂಡ ಅಲ್ಲಲ್ಲಿ ವೀಕ್ಷಣೆ ನಡೆಸಿ, ಡ್ರೋನ್ ಬಳಸಿ ಕಾಡಾನೆಯ ಚಲನ ವಲನಗಳನ್ನು ಪತ್ತೆ ಹಚ್ಚಲಾಗುತ್ತಿದೆ.ಕಾಡಾನೆಯನ್ನು ಸೆರೆ ಹಿಡಿಯಲು ಸಾಕಾನೆಗಳ ಸಹಕಾರ ಪಡೆಯಲಾಗುತ್ತದೆ. ಒಂದು ಕಾಡಾನೆ ಇರುವ ಜಾಗವನ್ನು ಪತ್ತೆ ಹಚ್ಚುವ ಕೆಲಸ ನಡೆಸುತ್ತಿದೆ‌.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *