Connect with us

    LATEST NEWS

    ರಾತ್ರಿ ಕರ್ಪ್ಯೂಗೆ ಕರಾವಳಿಯಲ್ಲಿ ವಿರೋಧ – ಧಾರ್ಮಿಕ ಕಾರ್ಯಕ್ರಮಗಳಿಗೆ ಅನುವು ಮಾಡಿಕೊಡಲು ಮನವಿ

    ಮಂಗಳೂರು ಎಪ್ರಿಲ್ 09: ನಾಳೆಯಿಂದ ಪ್ರಾರಂಭವಾಗಲಿರುವ ರಾತ್ರಿ ಕರ್ಪ್ಯೂಗೆ ಕರಾವಳಿಯಲ್ಲಿ ಹಿಂದೂ ಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದ್ದು, ಜಿಲ್ಲೆಯಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳಿಗೆ ಈ ರಾತ್ರಿ ಕರ್ಪ್ಯೂವಿನಿಂದಾಗಿ ತೊಂದರೆಯಾಗಲಿದ್ದು, ರಾತ್ರಿ ಕರ್ಪ್ಯೂವನ್ನು ತೆಗೆಯಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.


    ಈಗಾಗಲೇ ಉಡುಪಿ ಶಾಸಕ ರಘುಪತಿ ಭಟ್ ಮುಖ್ಯಮಂತ್ರಿಗಳಿಗೆ ಈ ಕುರಿತಂತೆ ಮನವಿ ಮಾಡಿದ್ದು, ಈಗ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಅವರು ಮಂಗಳೂರಿನಲ್ಲಿ ರಾತ್ರಿ ವೇಳೆ ನಡೆಯುವಂತ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳನ್ನು ಸರಕಾರವು ಕೋವಿಡ್ ನಿಯಮಾವಳಿಗಳನ್ನು ಪಾಲಿಸಿಕೊಂಡು ನಡೆಸಲು ಅವಕಾಶ ಕಲ್ಪಿಸಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

    ಕೋವಿಡ್ 19 ಕಾರಣದಿಂದ ಕಳೆದ ವರ್ಷವೂ ಕೂಡ ಎಲ್ಲಾ ಕಡೆಗಳಲ್ಲೂ ಧಾರ್ಮಿಕ ಕಾರ್ಯಕ್ರಮಗಳು ನಡೆಸಲು ಸಾಧ್ಯವಾಗಿಲ್ಲ. ಮತ್ತೆ ಈ ವರ್ಷವೂ ಕೂಡ ಧಾರ್ಮಿಕ ಕಾರ್ಯಕ್ರಮಗಳು ನಿಂತು ಹೋದರೆ ಸಮಾಜದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಹಾಗಾಗಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸರಕಾರಕ್ಕೆ ಶಾಸಕನ ನೆಲೆಯಲ್ಲಿ, ಕೋವಿಡ್ ನಿಯಮಾವಳಿಗಳನ್ನು ಪಾಲಿಸಿಕೊಂಡು ಸರಳವಾಗಿ ಈಗಾಗಲೇ ನಿಗದಿಪಡಿಸಿದ ಕೋಲ, ನೇಮ, ಯಕ್ಷಗಾನ, ನಾಗಾರಾಧನೆ ಇತ್ಯಾದಿ ಧಾರ್ಮಿಕ ಕಾರ್ಯಗಳನ್ನು ನಡೆಸಲು ಅವಕಾಶ ಕಲ್ಪಿಸಬೇಕೆಂದು ಶಾಸಕ ಕಾಮತ್ ಮನವಿ ಮಾಡಿಕೊಂಡಿದ್ದಾರೆ

    Share Information
    Advertisement
    Click to comment

    You must be logged in to post a comment Login

    Leave a Reply