Connect with us

    DAKSHINA KANNADA

    ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಪದ್ಮರಾಜ್‌ ಆರ್‌ ನೇಮಕ..!

    ಮಂಗಳೂರು, ಎಪ್ರಿಲ್ 25 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಪದ್ಮರಾಜ್‌ ಆರ್‌ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಪಕ್ಷ ಆದೇಶ ಹೊರಡಿಸಿದೆ.

    ಬಿಲ್ಲವ ಸಮುದಾಯದ ಯುವ ನಾಯಕ, ಗುರುಬೆಳದಿಂಗಲು ಸೇವಾ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆರ್‌ ಪದ್ಮರಾಜ್ ಅವರು ತಮ್ಮ ಸಮಾಜಮುಖಿ ಕೆಲಸಗಳಿಂದ ಹೆಚ್ಚು ಜನಪ್ರಿಯರಾಗಿದ್ದಾರೆ.

    ಇತ್ತೀಚೆಗೆ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿಯೂ ಇವರು ಕಣಕ್ಕಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದರೆ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನೂ ಹೊಂದಿರದ, ಕನಿಷ್ಠ ಟಿಕೆಟ್‌ಗಾಗಿ ಅರ್ಜಿಯನ್ನೂ ಸಲ್ಲಿಸದ ಇವರಿಗೆ ಟಿಕೆಟ್ ನೀಡಿದರೆ ಪಕ್ಷದ ಕಾರ್ಯಕರ್ತರು ಬಂಡಾಯವೇಳ ಬಹುದು ಎನ್ನುವ ಕಾರಣಕ್ಕೆ ಇವರಿಗೆ ಟಿಕೆಟ್ ಕೈತಪ್ಪಿದೆ ಎಂದು ಹೇಳಲಾಗಿತ್ತು.

    ಇದೀಗ ಚುನಾವಣಾ ಹೊತ್ತಿನಲ್ಲೇ ಆರ್‌ ಪದ್ಮರಾಜ್‌ ಅವರನ್ನು ಪಕ್ಷ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply