Connect with us

    LATEST NEWS

    ಫಲ್ಗುಣಿ ನದಿಯಲ್ಲಿ ನೀರುಪಾಲಾದ ಓರ್ವನ ಮೃತದೇಹ ಪತ್ತೆ

    ಮಂಗಳೂರು ಅಕ್ಟೋಬರ್ 1: ಮರವೂರು ಫಲ್ಗುಣಿ ನದಿಯಲ್ಲಿ ಈಜಲು ತೆರಳಿ ನೀರುಪಾಲಾಗಿದ್ದ ಇಬ್ಬರು ಯುವಕರಲ್ಲಿ ಓರ್ವನ ಮೃತದೇಹ ಪತ್ತೆಯಾಗಿದೆ. ಉರ್ವಸ್ಟೋರಿನ ಅನೀಶ್ (19) ಅವರ ಮೃತದೇಹ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.


    ಅನೀಶ್ ಅವರ ಮೃತದೇಹವನ್ನು ಬೆಂಗ್ರೆಯ ಮುಳುಗು ತಜ್ಞರು ಮೇಲೆಕ್ಕೆತ್ತಿದ್ದಾರೆ. ಕೊಟ್ಟಾರ ಚೌಕಿಯ ಸುಮಿತ್ (20) ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ನಿನ್ನೆ ಬೆಳಗ್ಗೆ ಬೆಂಗ್ರೆಯಿಂದ ಮುಳುಗು ತಜ್ಞರು ಆಗಮಿಸಿ ಯುವಕರಿಗಾಗಿ ಶೋಧ ಕಾರ್ಯ ಆರಂಭಿಸಿದ್ದರು. ಮುಳುಗು ತಜ್ಞರೊಂದಿಗೆ ಅಗ್ನಿಶಾಮಕ ದಳದವರೂ ಕಾರ್ಯಾಚರಣೆ ನಡೆಸುತ್ತಿದ್ದರು. ಬಜಪೆ ಪೊಲೀಸ್ ಇನ್‌ಸ್ಪೆಕ್ಟರ್ ಸಂದೀಪ್ ಜಿ.ಎಸ್. ಹಾಗೂ ಸಿಬ್ಬಂದಿ ಸ್ಥಳದಲ್ಲಿ ಮೊಕ್ಕಾಂ ಇದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply