LATEST NEWS
ಪಾಣೆಮಂಗಳೂರು – ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಶವ ಪತ್ತೆ
ಮಂಗಳೂರು ನವೆಂಬರ್ 9: ನಿನ್ನೆ ಪಾಣೆಮಂಗಳೂರು ಸೇತುವೆ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಶವ ಇಂದು ಪತ್ತೆಯಾಗಿದೆ. ನದಿಗೆ ಹಾರಿದ ಯುವಕ ಪುತ್ತೂರು ತಾಲೂಕಿನ ಬಲ್ನಾಡು ಕಾಂತಿಲ ನಿವಾಸಿ ಸುಚೇತನ್ (27) ಎಂದು ತಿಳಿದುಬಂದಿದೆ.
ಸುಚೇತನ್ ಭಾನುವಾರ ಮಂಗಳೂರಿನ ಪಿಜಿಯಿಂದ ಬಂದು ಬೆಳಗ್ಗೆ ಪಾಣೆಮಂಗಳೂರು ಹೊಸ ಸೇತುವೆಯ ಬಳಿ ತನ್ನ ಬ್ಯಾಗ್ ಇರಿಸಿ ನದಿಗೆ ಹಾರಿದ್ದು, ಯಾರೋ ಅದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಬ್ಯಾಗಿನಲ್ಲಿ ಸಿಕ್ಕ ಆಧಾರ್ ಕಾರ್ಡ್, ವೋಟರ್ ಐಡಿ ಆಧಾರದ ಮೇರೆಗೆ ಇದೇ ಯುವಕ ನದಿಗೆ ಹಾರಿದ್ದಾನೆ ಎಂದು ಸಂಶಯಿಸಿ ಮನೆಗೆ ಮಾಹಿತಿ ನೀಡಲಾಗಿತ್ತು. ಮನೆಯವರು ಕೂಡ ಆಗಮಿಸಿದ್ದರು. ಬಳಿಕ ರಾತ್ರಿವರೆಗೂ ಬಂಟ್ವಾಳದ ಅಗ್ನಿಶಾಮಕ ದಳ, ಸ್ಥಳೀಯ ಈಜುಗಾರರು ಬೋಟಿನ ಮೂಲಕ ಸಂಜೆಯವರೆಗೂ ಹುಡುಕಾಡಿದರೂ, ಯುವಕನ ಶವ ಪತ್ತೆಯಾಗಿರಲಿಲ್ಲ. ಸೋಮವಾರ ಕೂಡ ಹುಡುಕಾಟ ಮುಂದುವರಿಸಿದ್ದು, ಯುವಕನ ಮೃತದೇಹ ಪಾಣೆಮಂಗಳೂರು ಹೊಸ ಸೇತುವೆ ತಳಭಾಗದಲ್ಲಿ ಸಿಕ್ಕಿದೆ.
You must be logged in to post a comment Login