Connect with us

LATEST NEWS

ಪಾಂಗಾಳ – ವ್ಯಕ್ತಿಯೊಬ್ಬರ ಬರ್ಬರ ಕೊಲೆ

ಕಾಪು ಫೆಬ್ರವರಿ 05: ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಇಂದು ಸಂಜೆ ಪಾಂಗಾಳ ಎಂಬಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ (41) ಎಂದು ಗುರುತಿಸಲಾಗಿದೆ.


ಪಾಂಗಾಳ ಶ್ರೀ ಜನಾರ್ದನ ದೇವಸ್ಥಾನದ ಬಳಿಯ ಅಂಗಡಿಯ ಬಳಿ ಈ ಕೃತ್ಯ ನಡೆದಿದ್ದು, ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ‌ ಬಿದ್ದಿದ್ದ ಶರತ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಮೃತಪಟ್ಟರು. ಕಾರ್ಕಳ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ, ಕಾಪು ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ, ಕಾಪು ಎಸ್ಸೈ ಸುಮ ಬಿ., ಕ್ರೈಂ ಎಸ್ಸೈ ಭರತೇಶ್ ಕಂಕಣವಾಡಿ ಸಹಿತ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

 

 

ಪಾಂಗಾಳದಲ್ಲಿ ನೇಮೋತ್ಸದಲ್ಲಿದ್ದ ಶರತ್ ಶೆಟ್ಟಿಯನ್ನು ಕರೆ ಮಾಡಿ ಪಾಂಗಾಳ ಸೇತುವೆ ಬಳಿ ಬರಲು ಹೇಳಿದ ದುಷ್ಕರ್ಮಿಗಳು ಅಲ್ಲಿ ಬಂದ ಶೆಟ್ಟರ ಮೇಲೆ ಡ್ರಾಗರ್‌ನಿಂದ ಹಲ್ಲೆ ಮಾಡಿ ಬಳಿಕ ಪರಾರಿಯಾಗಿದ್ದಾರೆ, ತೀವ್ರ ರಕ್ತ ಸ್ರಾವದಲ್ಲಿ ಬಿದಿದ್ದ ಶರತ್‌ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಭೂ ವ್ಯವಹಾರದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಶರತ್ ಶೆಟ್ಟಿ ಭೂ ವ್ಯವಹಾರ ಮಾಡಿಕೊಂಡಿದ್ದರು ಎನ್ನಲಾಗಿದೆ.

 

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *