DAKSHINA KANNADA
ಪುತ್ತೂರು – ಕೆಎಸ್ ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟ ಪ್ರಯಾಣಿಕ ಗಂಭೀರ
ಪುತ್ತೂರು ನವೆಂಬರ್ 05: ಚಲಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನಿಂದ ಪ್ರಯಾಣಿಕನೋರ್ವ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪುತ್ತೂರು ತಾಲೂಜಿನ ಕುಂಬ್ರದಲ್ಲಿ ನಡೆದಿದೆ. ಗಂಭೀರ ಗಾಯಗೊಂಡವರನ್ನು ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ಸುಲೈಮಾನ್(60)ಎಂದು ಗುರುತಿಸಲಾಗಿದೆ.
ಸುಲೈಮಾನ್ ಅವರು ಮಾಡಾವಿನಿಂದ ಕುಂಬ್ರಕ್ಕೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದು, ಕುಂಬ್ರ ತಲುಪುತ್ತಿದ್ದಂತೆ ಬಸ್ನಿಂದ ಇಳಿಯಲು ಬಸ್ಸಿನೊಳಗಡೆ ನಿಂತುಕೊಂಡಿದ್ದ ವೇಳೆ ಬಸ್ ಚಾಲಕ ಹಠಾತ್ತನೆ ಬ್ರೇಕ್ ಹಾಕಿದ ಪರಿಣಾಮ ಸುಲೈಮಾನ್ರವರು ಬಸ್ಸಿನಿಂದ ಹೊರಗೆಸೆಯಲ್ಪಟ್ಟು ತಲೆಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಗಾಯಾಳುವನ್ನು ತಕ್ಷಣ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪುತ್ತೂರು ಗ್ರಾಮಾಂತರ ಪೊಲೀಸರು ಬಸ್ ಚಾಲಕ ಮತ್ತು ನಿರ್ವಾಹನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆಂದು ಎಂದು ವರದಿಯಾಗಿದೆ.
You must be logged in to post a comment Login