DAKSHINA KANNADA
ಕೆಎಸ್ ಆರ್ ಟಿಸಿ ಬಸ್ ನಿಂದ ಕೆಳಗೆ ಎಸೆಯಲ್ಪಟ್ಟ ಪ್ರಯಾಣಿಕ….!!
ಪುತ್ತೂರು ಸೆಪ್ಟೆಂಬರ್ 16: ಕೆಎಸ್ಆರ್ ಟಿಸಿ ಬಸ್ ನಿಂದ ಪ್ರಯಾಣಿಕನೊಬ್ಬ ಎಸೆಯಲ್ಪಟ್ಟು ಗಂಭೀರಗಾಯಗೊಂಡ ಘಟನೆ ಪೆರುವಾಯಿ ಗ್ರಾಮದ ಕೆದುವಾರು ಎಂಬಲ್ಲಿ ಸೆಪ್ಟೆಂಬರ್ 15 ರಂದು ನಡೆದಿದೆ. ಕೆದುವಾರು ನಿವಾಸಿ ಇನಾಸ್ ಡಿ ಸೋಜಾ ಗಾಯಗೊಂಡವರು.
ವಿಟ್ಲ ಪೇಟೆಯಿಂದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಸಂಚರಿಸುತ್ತಿರುವ ಸಂದರ್ಭ ಕೆದುವಾರು ಎಂಬಲ್ಲಿ ಬಸ್ ಸ್ಟಾಪ್ ನಲ್ಲಿ ಇಳಿಯಲು ಎದ್ದು ನಿಂತಾಗ ಕೆಎಸ್ಆರ್ಟಿಸಿ ಚಾಲಕನು ತಿರುವು ರಸ್ತೆಯಲ್ಲಿ ಒಮ್ಮೆಲೇ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಬಸ್ಸನ್ನು ಚಲಾಯಿಸಿದ್ದರಿಂದ ಬಸ್ಸಿನ ಹಿಂಬದಿಯ ಬಾಗಿಲಿನಿಂದ ರಸ್ತೆಗೆ ಎಸೆಯಲ್ಪಟ್ಟ ಪರಿಣಾಮ ತಲೆಗೆ ಮತ್ತು ದೇಹದ ಇತರ ಭಾಗಗಳಿಗೆ ಗಾಯವಾಗಿದೆ.
ಇನಾಸ್ ಡಿಸೋಜಾ ಅವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
You must be logged in to post a comment Login