LATEST NEWS
ಪೇಜಾವರ ಶ್ರೀಗಳು ಸನ್ಯಾಸಿಗಳು ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲ – ಶೋಭಾ ಕರಂದ್ಲಾಜೆ
ಪೇಜಾವರ ಶ್ರೀಗಳು ಸನ್ಯಾಸಿಗಳು ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲ – ಶೋಭಾ ಕರಂದ್ಲಾಜೆ
ಮಂಗಳೂರು ಜೂನ್ 05: ಪೇಜಾವರ ಶ್ರೀಗಳು ಸನ್ಯಾಸಿಗಳು ಅವರಿಗೆ ಕೇಂದ್ರ ಸರಕಾರದ ಅಭಿವೃದ್ದಿ ಯೋಜನೆಗಳು ಹಾಗೂ ಸಾಧನೆಗಳ ಬಗ್ಗೆ ಅರಿವಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ ಕೇಂದ್ರ ಸರಕಾರದ ಸಾಧನೆ ಬಗ್ಗೆ ಪೇಜಾವರ ಶ್ರೀಗಳು ಅಸಮಧಾನ ವ್ಯಕ್ತಪಡಿಸಿದ ಕುರಿತು ಪ್ರತಿಕ್ರಿಯಿದ ಅವರು ಪೇಜಾವರ ಸ್ವಾಮಿಜೀಯವರು ಸನ್ಯಾಸಿಗಳು. ಅವರು ಹೆಚ್ಚಾಗಿ ಟಿವಿ ನೋಡೋದಿಲ್ಲ.
ಕೇಂದ್ರ ಸರಕಾರ ದಾಖಲೆ ಪ್ರಮಾಣದ ಸಾಧನೆಗಳನ್ನು ಮಾಡಿದೆ . ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಗರಿಮೆ ಹೆಚ್ಚಿಸಿದೆ. ಹಲವಾರು ಜನಪರ ಅಭಿವೃದ್ಧಿ ಯೋಜನೆ ಗಳನ್ನು ನರೇಂದ್ರ ಮೋದಿ ನೇತೃತ್ವದ ಸರಕಾರ ಕೈಗೋಡಿದೆ. ಈ ಎಲ್ಲಾ ಕೇಂದ್ರ ಸರ್ಕಾರದ ಸಾಧನೆ ಬಗ್ಗೆ ಪಕ್ಷದ ಹಿರಿಯರಿಂದ ಪೇಜಾವರ ಸ್ವಾಮಿಗಳಿಗೆ ಮನವರಿಕೆ ಮಾಡಲಾಗುವುದೆಂದು ಅವರು ಹೇಳಿದರು.
ಪೇಜಾವರ ಸ್ವಾಮಿಗಳನ್ನು ಭೇಟಿಯಾಗುವವರು ಸರ್ಕಾರದ ಯೋಜನೆಗಳ ಬಗ್ಗೆ ಮಾತನಾಡದೇ ಇರೋದ್ರಿಂದ ಪೇಜಾವರ ಸ್ವಾಮಿಗಳು ತಪ್ಪು ಅಭಿಪ್ರಾಯ ಹೊಂದಿರಬಹುದು ಎಂದು ಶೋಭಾ ಕರಂದ್ಲಾಜೆ ಅಭಿಪ್ರಾಯ ಪಟ್ಟರು.
You must be logged in to post a comment Login