Connect with us

    LATEST NEWS

    ಮರಳಿನ ಸಮಸ್ಯೆ ಬಗೆಹರಿಯದಿದ್ದರೆ ನವೆಂಬರ್ 10 ರಿಂದ ಉಪವಾಸ – ಪೇಜಾವರ ಶ್ರೀ

    ಮರಳಿನ ಸಮಸ್ಯೆ ಬಗೆಹರಿಯದಿದ್ದರೆ ನವೆಂಬರ್ 10 ರಿಂದ ಉಪವಾಸ – ಪೇಜಾವರ ಶ್ರೀ

    ಉಡುಪಿ ನವೆಂಬರ್ 1: ಅತಿಯಾದ ಮರಳುಗಾರಿಕೆ ಹಾಗೂ ಮರಳುಗಾರಿಕೆಗೆ ಪೂರ್ಣ ನಿಷೇಧ ಹೇರುವುದು ಪರಿಸರ ಹಾನಿಕರ. ಆದುದರಿಂದ ಸರಕಾರ ಯೋಗ್ಯವಾದ ನಿಯಂತ್ರಣದೊಂದಿಗೆ ಮರಳುಗಾರಿಕೆಗೆ ಅವಕಾಶ ಕಲ್ಪಿಸಬೇಕು. ಮರಳಿನ ಸಮಸ್ಯೆ ನವೆಂಬರ್ 10 ರೊಳಗೆ ಪರಿಹರಿಸದಿದ್ದರೆ ನಾನು ಉಪವಾಸ ಆಚರಣೆ ಮಾಡಲಿದ್ದೇನೆ ಎಂದು ಪೇಜಾವರ ಸ್ವಾಮೀಜಿ ಹೇಳಿದರು.

    ಉಡುಪಿ ಜಿಲ್ಲಾ ಮರಳು ಹೋರಾಟ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಳ್ಳಲಾಗಿರುವ ಅನಿದಿಷ್ಟಾವಧಿ ಅಹೋರಾತ್ರಿ ಧರಣಿಯ ಎಂಟನೆ ದಿನವಾದ ಗುರುವಾರ ಪೇಜಾವರ ಹಿರಿಯ ಮಠಾಧೀಶ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಭಾಗವಹಿಸಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.

    ಈ ಹೋರಾಟ ಸುಖಾಂತ್ಯ ಕಾಣುವಂತೆ ಪೇಜಾವರ ಸ್ವಾಮೀಜಿ ಧರಣಿಯಲ್ಲಿ 10 ನಿಮಿಷಗಳ ಕಾಲ ವಿಷ್ಣು ಸಹಸ್ರನಾಮ ಪಾರಾಯಣ ಮಾಡಿದರು.

    Share Information
    Advertisement
    Click to comment

    You must be logged in to post a comment Login

    Leave a Reply