LATEST NEWS
ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಲು ಗಣ್ಯರ ದಂಡು ಉಡುಪಿಗೆ
ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಲು ಗಣ್ಯರ ದಂಡು ಉಡುಪಿಗೆ
ಉಡುಪಿ ಡಿಸೆಂಬರ್ 22: ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಶ್ರೀಗಳು ಆರೋಗ್ಯ ವಿಚಾರಿಸಲು ಗಣ್ಯರ ದಂಡೆ ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡುತ್ತಿದೆ.
ಇಂದು ಶ್ರೀಗಳ ಆರೋಗ್ಯ ವಿಚಾರಿಸಲು ವಿಧಾನಸಭೆ ಸ್ಪೀಕರ್ ವಿಶ್ವೇಶರ ಹೆಗಡೆ ಕಾಗೇರಿ ಆಗಮಿಸಿ ಶ್ರೀಗಳ ಆರೋಗ್ಯ ವಿಚಾರಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕೋಟಿ ಕೋಟಿ ಜನರು ಪ್ರಾರ್ಥಿಸುತ್ತಿದ್ದು, ಶ್ರೀಗಳ ಆರೋಗ್ಯ ಸುಧಾರಣೆ ಆಗುತ್ತೆಯೆಂಬ ವಿಶ್ವಾಸವಿದೆ ಎಂದರು. ರಾಷ್ಟ್ರ ಕಾರ್ಯದಲ್ಲಿ ಪೇಜಾವರ ಶ್ರೀಗಳದ್ದು ದೊಡ್ಡ ಕೊಡುಗೆಯಿದೆ. ಶ್ರೀಗಳು ನಿಧಾನಗತಿಯಲ್ಲಿ ಚಿಕಿತ್ಸೆಗೆ ಸ್ಪಂದಿಸುತಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ ಎಂದರು.
ಮಂತ್ರಾಲಯ ಮಠಾಧೀಶ ಸುಭುದೇಂದ್ರ ತೀರ್ಥ ಸ್ವಾಮೀಜಿ ಕೂಡ ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದರು. ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸುಭುದೇಂದ್ರ ತೀರ್ಥ ಶ್ರೀ ಮಂತ್ರಾಲಯದಲ್ಲಿ ದೈನಂದಿನ ಪೂಜೆ ಮುಗಿಸಿ ಬಂದಿದ್ದೇವೆ. ಶ್ರೀಗಳನ್ನು ಕಣ್ಣಾರೆ ನೋಡಿ ಈಗ ತೃಪ್ತಿ ಆಯಿತು.
ಕ್ರಮ ಕ್ರಮವಾಗಿ ಗುಣಮುಖರಾಗ್ತಾ ಇದ್ದು ಶ್ರೀಗಳ ಆರೋಗ್ಯಕ್ಕಾಗಿ ಮಠದ ವತಿಯಿಂದ ಹೋಮ, ಜಪ, ಧಾರ್ಮಿಕ ವಿಧಿ ವಿಧಾನ ಏರ್ಪಡಿಸಿದ್ದೇವೆ ಎಂದರು. ದೇವರು ಅವರನ್ನು ಬೇಗ ಗುಣಮುಖವಾಗುವಂತೆ ಮಾಡಲಿ, ಪೇಜಾವರ ಶ್ರೀ ರಾಮಮಂದಿರಕ್ಕೆ ಧಾರ್ಮಿಕ ಲೌಕಿಕ ಹೋರಾಟ ಮಾಡಿದ ಹಿರಿಯ ವ್ಯಕ್ತಿಯಾಗಿದ್ದು, ತೀರ್ಪು ಹಿನ್ನಲೆ ಶೀಘ್ರ ಮಂದಿರ ನಿರ್ಮಾಣವಾಗಿ, ಪೇಜಾವರ ಶ್ರೀಗಳೇ ರಾಮಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಿ ಎಂದರು.
You must be logged in to post a comment Login