Connect with us

    LATEST NEWS

    ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಭೇಟಿ ಮಾಡಿದ ಪೇಜಾವರ ಶ್ರೀಗಳು

    ಉಡುಪಿ ಅಕ್ಟೋಬರ್ 12: ಶ್ರೀ ಪೇಜಾವರ ಮಠಾಧೀಶಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬುಧವಾರ ದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿಯವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.


    ಅಯೋಧ್ಯಾ ರಾಮಜನ್ಮಭೂಮಿ ಆಂದೋಲನದಲ್ಲಿ ಅಡ್ವಾಣಿ ಯವರ ಪಾತ್ರವನ್ನು ಶ್ರೀಗಳು ಬಣ್ಣಿಸಿ ಆ ಹೋರಾಟದ ಫಲವಾಗಿ ಇಂದು ಭವ್ಯರಾಮಮಂದಿರ ನಿರ್ಮಾಣಗೊಳ್ಳುವಂತಾಗಿದೆ ಎಂದರು. ಶ್ರೀ ವಿಶ್ವೇಶತೀರ್ಥಶ್ರೀಪಾದರು ತಮಗೆ ಯಾವತ್ತೂ ನೀಡಿದ ಸ್ಫೂರ್ತಿಯನ್ನು ಮನಸಾರೆ ಸ್ಮರಿಸಿದರು.

    ಅಡ್ವಾಣಿಯವರಿಗೆ ಶ್ರೀ ಕೃಷ್ಣನ ಗಂಧ ಪ್ರಸಾದ ಶಾಲು ಸ್ಮರಣಿಕೆ ಫಲಮಂತ್ರಾಕ್ಷತೆಯಿತ್ತು ಆಶೀರ್ವದಿಸಿದರು .ಸ್ವಲ್ಪ ಅನಾರೋಗ್ಯವಿದ್ದರೂ ಅಡ್ವಾಣಿಜೀ ಮನೆ ಬಾಗಿಲಿನ ಬಳಿ ಬಂದು ಶ್ರೀಗಳವರನ್ನು ಬೀಳ್ಕೊಟ್ಟರು.

    Share Information
    Advertisement
    Click to comment

    You must be logged in to post a comment Login

    Leave a Reply