Connect with us

    DAKSHINA KANNADA

    ಸೂಕ್ತ ವ್ಯವಸ್ಥೆ ಕಲ್ಪಿಸದಿದ್ದರೆ ಇದೇ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತೆವೆ…!!

    ಸುಳ್ಯ, ಸೆಪ್ಟೆಂಬರ್ 1: ಜಲಸ್ಪೋಟದಿಂದ ಮನೆಗಳಿಗೆ ನೀರು ನುಗ್ಗಿ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಜನರು ಸ್ಥಳಕ್ಕೆ ಆಗಮಿಸಿದ ಶಾಸಕ ಬೋಪಯ್ಯ ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸದಿದ್ದರೆ ಪತ್ರ ಬರೆದಿಟ್ಟು ಇದೇ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಮ್ಮ ನೋವನ್ನು ತೋಡಿಕೊಂಡಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


    ಕೊಯಾನಾಡಿನಲ್ಲಿ ಜಲಸ್ಫೋಟಗೊಂಡು ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರನ್ನು ಭೇಟಿಯಾಗಲು ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಅವರು ಆಗಮಿಸಿದ್ದು, ಈ ವೇಳೆ ಶಾಸಕರಲ್ಲಿ ನೋವು ತೋಡಿಕೊಂಡ ಅವರು ಕಿಂಡಿ ಅಣೆಕಟ್ಟು ಮಾಡುವಾಗ ನಮ್ಮ ಅಭಿಪ್ರಾಯ ಕೇಳಿಲ್ಲ. ಈಗ ಸಮಸ್ಯೆ ಆಗಿರುವುದು ನಮಗೆ. ಇದೊಂದು ಪ್ರಕೃತಿ ವಿಕೋಪದಿಂದ ಆಗಿದ್ದರೆ ಯಾವುದೇ ಸಮಸ್ಯೆಯಿರಲಿಲ್ಲ, ಇದು ಮಾನವ ನಿರ್ಮಿತ ವಿಕೋಪವಾಗಿದೆ, ನಮ್ಮನ್ನು ನೀವೆಲ್ಲ ಸೇರಿ ನಿರಾಶ್ರಿತರಾಗಿ ಮಾಡಿದ್ದೀರಿ ಎಂದು ಅಳಲು ತೋಡಿಕೊಂಡರು.

    ಮುಖ್ಯಮಂತ್ರಿ ಸೇರಿ ಹಲವು ಸಚಿವರು ಬಂದು ಹೋದರು, ಯಾರಿಂದಲೂ ಪರಿಹಾರ ದೊರಕಿಲ್ಲ, ನೀವು ಕೂಡ ನಮ್ಮ ಸಮಸ್ಯೆಯನ್ನು ಕೇಳುವ ಪರಿಸ್ಥಿತಿಯಲ್ಲಿಲ್ಲ. ನಾವು ಮತ್ತು ಕುಟುಂಬಸ್ಥರೆಲ್ಲರೂ ಇದೇ ಕಿಂಡಿ ಆಣೆಕಟ್ಟುವಿನಿಂದ ಹಾರಿ ಆತ್ಮಹತ್ಯೆ ಮಾಡುತ್ತೇವೆ ಎಂದು ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply