Connect with us

    KARNATAKA

    ವಿಲ್ಹಿಂಗ್ ಮಾಡುವವರಿಗೆ ಒಳ್ಳೆ ಬುದ್ದಿ ಕಲಿಸಿದ ಜನ….!!

    ಬೆಂಗಳೂರು ಅಗಸ್ಟ್ 18: ಜನ ನಿಬಿಡ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದ ಇಬ್ಬರ ಸ್ಕೂಟರ್ ಗಳನ್ನು ಜನರು ಪ್ಲೈಓವರ್ ನಿಂದ ಕೆಳಗೆ ಬಿಸಾಡಿದ ಘಟನೆ ಗುರುವಾರ ನೆಲಮಂಗಲದಲ್ಲಿ ನಡೆದಿದೆ.
    ನೆಲಮಂಗಲ ಸಂಚಾರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಹಿಂಬದಿ ಸವಾರರು ಸೇರಿದಂತೆ ಇಬ್ಬರು ಯುವಕರು ತಮ್ಮ ಸ್ಕೂಟರ್‌ಗಳಲ್ಲಿ ವ್ಹೀಲಿಂಗ್‌ ಮಾಡುತ್ತಿದ್ದರು.


    ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಒಂದು ಸ್ಕೂಟರ್ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಸಿಟ್ಟಿಗೆದ್ದ ವಾಹನ ಸವಾರರು ಆತನ ಮತ್ತು ಮತ್ತೊಬ್ಬ ಯುವಕನ ಸ್ಕೂಟರ್​ಅನ್ನು ಫ್ಲೈಓವರ್ ನಿಂದ ಕೆಳಗೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ವ್ಹೀಲಿಂಗ್‌ ಮಾಡುತ್ತಿದ್ದ ಇಬ್ಬರು ಯುವಕರು ಮತ್ತು ಹಿಂಬದಿ ಸವಾರರು ತಕ್ಷಣ ಸ್ಥಳದಿಂದ ಪರಾರಿಯಾಗಿದ್ದಾರೆ. ಅಲ್ಲಿ ನೆರೆದಿದ್ದ ವ್ಯಕ್ತಿಯೊಬ್ಬ ಘಟನೆಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದು, ಅದು ಶನಿವಾರ ವೈರಲ್ ಆಗಿದೆ.

    ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ದ್ವಿಚಕ್ರ ವಾಹನದ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.
    ಮತ್ತೊಂದೆಡೆ, ಗುರುವಾರ ಬೆಂಗಳೂರು ಈಶಾನ್ಯ ಸಂಚಾರ ಪೊಲೀಸರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೈಕ್​​ ವ್ಹೀಲಿಂಗ್​ ನಡೆಸಿ ಪುಂಡಾಟ ಮೆರೆದಿದ್ದ 44 ಯುವಕರನ್ನು ಯಲಹಂಕ ಪೊಲೀಸರು ವಶಕ್ಕೆ ಪಡೆದಿದ್ದರು. ಬೈಕ್​ ವ್ಹೀಲಿಂಗ್​​​ ಸಂಬಂಧ 33 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply