LATEST NEWS
ಪೆಟ್ರೋಲ್ ಬಂಕ್ ದರೋಡೆಕೋರರ ಬಂಧನ…!
ಮಂಗಳೂರು ಅಕ್ಟೋಬರ್ 4: ಮಾರಕಾಸ್ತ್ರಗಳೊಂದಿಗೆ ಹೆದ್ದಾರಿ ಬದಿಯ ಪೆಟ್ರೋಲ್ ಬಂಕ್ ಗಳನ್ನು ದರೋಡೆ ಮಾಡುತ್ತಿದ್ದ ಮೂವರು ಖತರ್ನಾಕ್ ದರೋಡೆಕೋರರನ್ನು ಮಂಗಳೂರಿನ ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಇದೇ ತಂಡ ಜಿಲ್ಲೆಯ ವಿವಿಧ ಕಳವು ಪ್ರಕರಣಗಳಲ್ಲೂ ಭಾಗಿಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸೆಪ್ಟೆಂಬರ್ 20 ರಂದು ರಾತ್ರಿ ಮಂಗಳೂರಿನ ಪಂಪ್ವೆಲ್ ಉಜ್ಜೋಡಿ ಬಳಿಯ ಸುವರ್ಣ ಪೆಟ್ರೊಲ್ ಪಂಪ್ಗೆ ಬೈಕಿನಲ್ಲಿ ಬಂದು ಬಾಗಿಲು ಒಡೆದು ಕ್ಯಾಶ್ ಗಳೊಂದಿಗೆ ಪರಾರಿಯಾಗಿದ್ದರು. ಬಳಿಕ ಇದೇ ತಂಡ ಬಂಟ್ವಾಳದ ಪೆಟ್ರೋಲ್ ಪಂಪ್ ನಲ್ಲೂ ಕಳವು ಮಾಡಿತ್ತು.
ಅಲ್ಲದೇ ಜಿಲ್ಲೆ ವಿವಿಧ ಪೊಲೀಸ್ ಠಾಣೆಗಳಲ್ಲಿ 6 ಕಳವು ಪ್ರಕರಣಗಳು ದಾಖಲಾಗಿವೆ. ಬಂಧಿತರರನ್ನು ಉಳ್ಳಾಲ ಕೆ ಸಿ ರೋಡಿನ ಮೋಹಮ್ಮದ್ ಸುಹೈಲ್, ಆಶೀಕ್ ಮತ್ತು ನಗರದ ಫಳ್ನೀರಿನ ಮಹಮ್ಮದ್ ಇಕ್ಬಾಲ್ ಎಂದು ಗುರುತ್ತಿಸಲಾಗಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Facebook Comments
You may like
-
ಉಳ್ಳಾಲ ಮಹಿಳೆಗೆ ಅತ್ಯಾಚಾರ ಕಿರುಕುಳ ಆರೋಪ – ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಲಿ :ಎಸ್ಡಿಪಿಐ
-
ಸಿಎಎ ಪ್ರತಿಭಟನೆ ಸಂದರ್ಭ ನಡೆದ ಗೋಲಿಬಾರ್ ಗೆ ಪ್ರತೀಕಾರವಾಗಿ ಪೊಲೀಸ್ ಮೇಲೆ ಹಲ್ಲೆ – ಮಾಯಾ ಗ್ಯಾಂಗ್ ನ ಸದಸ್ಯರ ಆರೆಸ್ಟ್
-
ಕೇರಳ ಭೀಕರ ಅತ್ಯಾಚಾರ ಪ್ರಕರಣ ಬಯಲು 17ರ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ 38 ಮಂದಿ
-
ಕಟ್ಟಿಗೆಯಲ್ಲಿ ಹಲ್ಲೆ ಮಾಡಿ ತಂದೆಯನ್ನೇ ಕೊಲೆ ಮಾಡಿದ ಮಗ
-
ಅನುಮತಿ ಇಲ್ಲದೆ ಡ್ರೋನ್ ಬಳಸಿದರೆ ಕಠಿಣ ಕ್ರಮ – ಪೊಲೀಸ್ ಆಯುಕ್ತರ ಎಚ್ಚರಿಕೆ
-
ಸಹಾಯದ ನೆಪದಲ್ಲಿ ಮದ್ಯವಯಸ್ಸಿನ ಮಹಿಳೆ ಹಾಗೂ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ..ಎಸ್ ಡಿಪಿಐ ಮುಖಂಡನ ಮೇಲೆ ಪೋಕ್ಸೋ ಪ್ರಕರಣ ದಾಖಲು
You must be logged in to post a comment Login