LATEST NEWS
ಅಕ್ಟೋಬರ್ 12 ಮಧ್ಯರಾತ್ರಿಯಿಂದಲೇ ಪೆಟ್ರೋಲ್ ಪಂಪ್ ಬಂದ್
ಅಕ್ಟೋಬರ್ 12 ಮಧ್ಯರಾತ್ರಿಯಿಂದಲೇ ಪೆಟ್ರೋಲ್ ಪಂಪ್ ಬಂದ್
ಬೆಂಗಳೂರು, ಅಕ್ಟೋಬರ್ 10: ಅಕ್ಟೋಬರ್ 12 ಮಧ್ಯರಾತ್ರಿಯಿಂದಲೇ ಪೆಟ್ರೋಲ್ ಪಂಪ್ ಬಂದ್ ಆಗಲಿವೆ.
ಪೆಟ್ರೋಲ್ ಪಂಪ್ ಮಾಲೀಕರ ಕಮಿಷನ್ ಮೊತ್ತವನ್ನು ಪರಿಷ್ಕರಿಸುವ ಕುರಿತ ನ್ಯಾಯಮೂರ್ತಿ ಅಪೂರ್ವಚಂದ್ರ ಸಮಿತಿಯ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೆಟ್ರೋಲ್ ಪಂಪ್ ಮಾಲಿಕರು ಅಕ್ಟೋಬರ್ 12 ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ರಾಷ್ಟ್ರದಾದ್ಯಂತ ಬಂದ್ಗೆ ಕರೆ ನೀಡಲಾಗಿದೆ. ಇದಕ್ಕೆ ರಾಜ್ಯದ ಪೆಟ್ರೋಲ್ ಬಂಕ್ ಮಾಲೀಕರೂ ಬೆಂಬಲ ವ್ಯಕ್ತಪಡಿಸಿದ್ದಾರೆ.ಅಖಿಲ ಕರ್ನಾಟಕ ಪೆಟ್ರೊಲಿಯಂ ವಿತರಕರ ಸಂಘ ಬಂದ್ ಗೆ ಸಂಪೂರ್ಣ ಬೆಂಲ ನೀಡಿದೆ. ಈ ಹಿನ್ನೆಲೆರಯಲ್ಲಿ ರಾಜ್ಯದ 4,000 ಬಂಕ್ಗಳು ಸೇರಿ ದೇಶದ 54 ಸಾವಿರ ಬಂಕ್ಗಳು ಬಂದ್ ಆಚರಿಸಲಿವೆ.
ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ GST ವ್ಯಾಪ್ತಿಗೆ ತರಬೇಕು. ದೇಶದಲ್ಲಿ ಉತ್ಪನ್ನಗಳ ಬೆಲೆಯಲ್ಲಿ ಏಕರೂಪತೆ ತರಬೇಕು.
ಇಂಧನ ಬೆಲೆ ಪ್ರತಿನಿತ್ಯ ಪರಿಷ್ಕರಣೆ ಅವೈಜ್ಞಾನಿಕವಾಗಿದ್ದು, ಇದನ್ನು ರದ್ದು ಮಾಡಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಬಂಕ್ ಮಾಲಿಕರು ಇಟ್ಟಿದ್ದಾರೆ.
Facebook Comments
You may like
ಅಪ್ರಾಪ್ತ ಬಾಲಕಿ ಮೇಲೆ ಸ್ವಂತ ಅಣ್ಣ ಹಾಗೂ ದೊಡ್ಡಪ್ಪನಿಂದ ಅತ್ಯಾಚಾರ
ತಿಥಿ ದಿನ ಪ್ರತ್ಯಕ್ಷನಾದ ಮೃತ ವ್ಯಕ್ತಿ…ಸತ್ಯವಾದ ಜ್ಯೋತಿಷಿಯ ಮಾತು….!!
ಸುಳ್ಳು ಸುದ್ದಿ ನೀಡಿದ್ದಕ್ಕೆ ಹಿರಿಯ ಪತ್ರಕರ್ತ ರಾಜದೀಪ್ ಸರ್ ದೇಸಾಯಿಯನ್ನು ಎರಡು ವಾರ ಸಸ್ಪೆಂಡ್ ಮಾಡಿದ ಇಂಡಿಯಾ ಟುಡೇ
ಆನೆಗೆ ಬೆಂಕಿ ಇಟ್ಟ ಪಾಪಿಗಳು! ಸುಟ್ಟ ನೋವು ತಾಳಲಾರದೆ ಆನೆ ಸಾವು
4ನೇ ಟೆಸ್ಟ್ ನಲ್ಲಿ ಆಸ್ಟ್ರೇಲಿಯಾ ವಿರುದ್ದ ರೋಚಕ ಗೆಲವು – ಸರಣಿ ಗೆದ್ದ ಭಾರತ
ಜನವರಿ 16 ರಿಂದ ಕೊರೊನಾ ಲಸಿಕೆ ವಿತರಣೆ ಆರಂಭ
Click to comment
You must be logged in to post a comment Login