Connect with us

KARNATAKA

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಪರಾರಿಯಾಗಿದ್ದ ಆರೋಪಿ ಅರೆಸ್ಟ್…!!

ಬೆಂಗಳೂರು ಮಾರ್ಚ್ 05: ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.


ಪಿಎಫ್‌ಐ (PFI) ಸದಸ್ಯ ಮಡಿಕೇರಿ ಮೂಲದ ತೌಫಿಲ್‌ನನ್ನು (Thufall) ಶನಿವಾರ ರಾತ್ರಿ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಬಂಧಿಸಲಾಗಿದೆ. ಎನ್ಐಎ ಅಧಿಕಾರಿಗಳು ಆರೋಪಿ ಪತ್ತೆಗೆ ಈ ಹಿಂದೆ ರೂಪಾಯಿ 5 ಲಕ್ಷ ಹಣ ಬಹುಮಾನ ಘೋಷಣೆ ಮಾಡಿದ್ದರು. ನಿನ್ನೆ ಖಚಿತ ಮಾಹಿತಿ ಮೇರೆಗೆ ಸುಮಾರು 10ಕ್ಕೂ ಹೆಚ್ಚು ಎನ್​ಐಎ ಅಧಿಕಾರಿಗಳು ತೌಫಿಲ್ ಮನೆ ಬಳಿಗೆ ಹೋಗಿದ್ದಾರೆ. ನಂತರ ಇಬ್ಬರು ಅಧಿಕಾರಿಗಳು ಫ್ಲಂಬರ್ ಅಂತ ಕೈಯಲ್ಲಿ ರಿಂಚ್ ಹಿಡಿದು ಮನೆ ಒಳಗೆ ಹೋಗಿದ್ದಾರೆ. ಈ ವೇಳೆ ತೌಫಿಲ್ ಮಟನ್​ ಕತ್ತರಿಸುತ್ತಿರುವುದು ಕಂಡುಬಂದಿದೆ.

ನಂತರ ಮತ್ತಿಬ್ಬರು ಒಳಗೆ ಬಂದಿದ್ದನ್ನು ನೋಡಿದ ತೌಘಿಲ್​​, ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಇದನ್ನು ತಿಳಿದ ಉಳಿದ ಅಧಿಕಾರಿಗಳು ಏಕಕಾಲಕ್ಕೆ ಒಳಗೆ ಬಂದು ತೌಘಿಲ್​ನನ್ನು ಲಾಕ್​ ಮಾಡಿ, ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

Advertisement
Click to comment

You must be logged in to post a comment Login

Leave a Reply