DAKSHINA KANNADA
ಹಲ್ಲೆ ಪ್ರಕರಣದಲ್ಲಿ ಬಂಧಿತ ಅಮಾಯಕರನ್ನು ಬಿಡುಗಡೆಗೆ ಆಗ್ರಹಿಸಿ ಪಿಎಫ್ಐ ನಿಂದ ಉಪ್ಪಿನಂಗಡಿ ಠಾಣೆ ಎದುರು ಪ್ರತಿಭಟನೆ
ಉಪ್ಪಿನಂಗಡಿ: ಡಿಸೆಂಬರ್ 6 ರ ರಾತ್ರಿ ನಡೆದ ಹಲ್ಲೆ ಪ್ರಕರಣದಲ್ಲಿ ಉಪ್ಪಿನಂಗಡಿ ಪೊಲೀಸರು ಅಮಾಯಕರನ್ನು ಬಂಧಿಸಿದ್ದಾರೆ ಎಂದು ಆರೋಪಿಸಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದು, ಸಮಯ ಕಳದಂತೆ ಪ್ರತಿಭಟನೆ ತೀವ್ರ ಸ್ಪರೂಪ ಪಡೆಯುತ್ತಿದೆ.
ಬೆಳಿಗ್ಗೆಯಿಂದಲೇ ಉಪ್ಪಿನಂಗಡಿ ಪೊಲೀಸ್ ಠಾಣೆ ಮುಂದೆ ಸೇರಿರುವ ಪಿಎಫ್ಐ ಕಾರ್ಯಕರ್ತರು ಬಂಧಿತ ಅಮಾಯಕರನ್ನು ಬಿಡುಗಡೆಗೊಳಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಆದರೆ ಪೊಲೀಸರು ಮನವಿಗೆ ಸ್ಪಂದಿಸದ ಕಾರಣ ಪೊಲೀಸ್ ಠಾಣೆ ಮುಂದೆ ಮಹಿಳೆಯರು ಸೇರಿತಂತೆ ನೂರಾರು ಕಾರ್ಯಕರ್ತರು ಸೇರಿದ್ದು ಪೊಲೀಸ್ ವಶದಲ್ಲಿದ್ದ ಪಿ.ಎಫ್.ಐ ಮುಖಂಡರನ್ನು ಬಿಡುಗಡೆ ಮಾಡುವಂತೆ ಧರಣಿ ನಡಸುತ್ತಿದ್ದಾರೆ.
ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು ಹಾಗು ಮಕ್ಕಳು ಸೇರಿಕೊಂಡಿದ್ದಾರೆ. ಬಂಧಿತರನ್ನು ಬಿಡುಗಡೆ ಮಾಡುವಂತೆ ಒತ್ತಡ ಹೇರುತ್ತಿದ್ದು ಅಮಾಯಕರನ್ನು ಬಿಡುಗಡೆಗೊಳಿಸದೇ ಜಾಗ ಖಾಲಿ ಮಾಡಲ ಎಂದು ಪಟ್ಟು ಹಿಡಿದಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ದಿಢೀರ್ ಪ್ರತಿಭಟನೆ ನಡೆದ ಕಾರಣ ಸಾರ್ವಜನಿಕರಿಗೆ ಸಮಸ್ಯೆಯಾಗಿತ್ತು.
You must be logged in to post a comment Login