Connect with us

    LATEST NEWS

    ಉಡುಪಿ ಪುತ್ತಿಗೆ ಮಠ ಪರ್ಯಾಯ ತಡೆ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

    ಬೆಂಗಳೂರು ಜನವರಿ 8: ಇನ್ನು ಕೆಲವೇ ದಿನಗಳಲ್ಲಿ ಪುತ್ತಿಗೆ ಮಠದ ಸುಗಣೇಂದ್ರ ತೀರ್ಥರು ಪರ್ಯಾಯ ಪೀಠವನ್ನು ಅಲಂಕರಿಸಲಿದ್ದು, ಈ ನಡುವೆ ಪುತ್ತಿಗೆ ಶ್ರೀಗಳ ಪರ್ಯಾಯ ಮಹೋತ್ಸವಕ್ಕೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.


    ಪುತ್ತಿಗೆ ಶ್ರೀಗಳು ಸಮುದ್ರೋಲ್ಲಂಘನೆ ಮಾಡಿ ವಿದೇಶಕ್ಕೆ ಪ್ರಯಾಣಿಸಿ ಸಂಪ್ರದಾಯ ಉಲ್ಲಂಘಿಸಿದ ಕಾರಣ ಅವರಿಗೆ ಪರ್ಯಾಯ ನೀಡದಂತೆ ಕೋರಿ ಗುರುರಾಜ ಜೀವನರಾವ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಕುರಿತು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ರಿದ್ದ ಪೀಠ, ವಿದೇಶದಲ್ಲಿ ಜ್ಞಾನ ಪ್ರಸಾರ ಮಾಡಿದರೆ ತಪ್ಪೇನು ಎಂದು ಪ್ರಶ್ನಿಸಿದೆ.


    2008ರಲ್ಲಿ ಕೂಡ ಪುತ್ತಿಗೆ ಶ್ರೀಗಳ ಪರ್ಯಾಯ ಪೀಠಾರೋಹಣಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಅಷ್ಟ ಮಠಗಳ ಪೈಕಿ ಆರು ಮಠಗಳ ಮಠಾಧೀಶರು ಪರ್ಯಾಯದಿಂದ ಅಂತರ ಕಾಯ್ದುಕೊಂಡಿದ್ದರು. ಆದರೆ, ಶೀರೂರು ಶ್ರೀಗಳು ಮಾತ್ರ ಪುತ್ತಿಗೆ ಶ್ರೀಗಳ ಪರ್ಯಾಯ ಪೀಠಾರೋಹಣಕ್ಕೆ ಬೆಂಬಲ ಸೂಚಿಸಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply