ತಿರುವನಂತಪುರಂ ಡಿಸೆಂಬರ್ 25: ಶಬರಿಮಲೆಯ ಚಿನ್ನಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಗಂಭೀರ ಆರೋಪಗಳನ್ನು ಮಾಡಿದ್ದು, ಚಿನ್ನಕಳ್ಳತನ ಪ್ರಕರಣದ ಆರೋಪಿಗಳ ಜೊತೆ ಕಾಂಗ್ರೇಸ್ ನಾಯಕಿ ಸೋನಿಯಾಗಾಂಧಿ ನಂಟಿನ ಬಗ್ಗೆ ಪ್ರಶ್ನಿಸಿದ್ದಾರೆ.

ಮುಂದಿನ ವರ್ಷದ ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ನಿಂದ ಕಠಿಣ ಪರೀಕ್ಷೆಯನ್ನು ಎದುರಿಸುತ್ತಿರುವ ಎಡ ಪ್ರಜಾಸತ್ತಾತ್ಮಕ ರಂಗ ಮೈತ್ರಿಕೂಟದ ಸಿಪಿಎಂ ನಾಯಕ, ಗೋವರ್ಧನ್ ಅವರು ಸೋನಿಯಾ ಗಾಂಧಿಯವರಿಂದ ಉಡುಗೊರೆಯನ್ನು ಸ್ವೀಕರಿಸುತ್ತಿರುವ ಮತ್ತು ಸೋನಿಯಾ ಗಾಂಧಿಯವರೊಂದಿಗೆ ಪೊಟ್ಟಿಯವರ ಮತ್ತೊಂದು ಪೋಟೋವನ್ನು ಹಂಚಿಕೊಂಡಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಪಿಣರಾಯಿ ಅವರು, ಕೇರಳದ ಮಾಜಿ ಸಿಎಂ ಕರುಣಾಕರನ್, ಹಿಮಂತ ಬಿಸ್ವಾ ಶರ್ಮಾ ಅವರಿಗೆ ಸೋನಿಯಾ ಗಾಂಧಿ ಅಪಾಯಿಂಟ್ಮೆಂಟ್ ಸಿಕ್ಕಿರಲಿಲ್ಲ. ಆದರೆ ಉನ್ನಿಕೃಷ್ಣನ್ ಪೊಟ್ಟಿಗೆ ಅಪಾಯಿಂಟ್ಮೆಂಟ್ ಸಿಕ್ಕಿದೆಯೇ? ಸೋನಿಯಾ ಹೆಚ್ಚಿನ ಭದ್ರತೆಯಿರುವ ನಾಯಕಿ. ಆರೋಪಿಗೆ ಹೇಗೆ ಅವರ ಭೇಟಿ ಸಾಧ್ಯವಾಯಿತು. ಸೋನಿಯಾ ಅವರು ಉನ್ನಿಕೃಷ್ಣನ್ ಪೊಟ್ಟಿ, ಗೋವರ್ಧನ್ರಿಂದ ಉಡುಗೊರೆ ಸ್ವೀಕರಿಸುತ್ತಿರುವ ಫೋಟೋವೊಂದನ್ನು ಸಿಎಂ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ನಾಯಕರಿಗೂ ಗೊತ್ತು ಅವರ ಭೇಟಿ ಎಷ್ಟು ಕಷ್ಟ ಎನ್ನುವುದು. ಹಾಗಿದ್ದರೆ ಆರೋಪಿಗೆ ಹೇಗೆ ಸಿಕ್ಕಿತು ಅವರ ಭೇಟಿ ಅವಕಾಶ?’ ಎಂದು ಪ್ರಶ್ನಿಸಿದ್ದಾರೆ.
ಈ ಮೂಲಕ ಶಬರಿಮಲೆ ಚಿನ್ನದ ಅವ್ಯವಹಾರದ ತನಿಖೆಯನ್ನು ರಾಜ್ಯ ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದ್ದ ಕಾಂಗ್ರೆಸ್ ಮತ್ತು ಯುಡಿಎಫ್ಗೆ ತಿರುಗೇಟು ನೀಡಿದ್ದಾರೆ.



