Connect with us

BELTHANGADI

ದೇಶದಲ್ಲಿ ಮುಸ್ಲಿಮರ ಜನಸಂಖ್ಯೆ ಜಾಸ್ತಿಯಾದರೆ ನಮ್ಮ ಪರಿಸ್ಥಿತಿ ಹೇಗಿರುತ್ತದೆ ಎಂದು ಯೋಜನೆ ಮಾಡಿ? : ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ, ಜನವರಿ 09: ದೇಶದಲ್ಲಿ ಮುಸ್ಲಿಮರ ಸಂಖ್ಯೆ 80 ಕೋಟಿ ಆಗಿ ಹಿಂದುಗಳ ಸಂಖ್ಯೆ ಕಡಿಮೆಯಾದರೆ ನಮ್ಮ ಪರಿಸ್ಥಿತಿ ಹೇಗಿರುತ್ತದೆ ಎಂದು ಯೋಜನೆ ಮಾಡಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು.

ಅವರು ಬೆಳ್ತಂಗಡಿಯ ಪೆರಾಡಿಯಲ್ಲಿ ನಡೆದ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ದೇಶದಲ್ಲಿ ಮುಸ್ಲಿಮರ ಸಂಖ್ಯೆ ಕಡಿಮೆ ಇದೆ, ನಮ್ಮ ಸಂಖ್ಯೆ ಜಾಸ್ತಿ ಇದೆ ಎನ್ನುವ ಯೋಚನೆ ನಮ್ಮಲ್ಲಿದ್ದು, ಏನೂ ಆಗೋದಿಲ್ಲ ಎನ್ನುವ ಮನೋಭಾವವಿದೆ.

ಆದರೆ ಅವರಿಗೆ ನಾಲ್ಕು ಜನ ಮಕ್ಕಳಿದ್ದರೆ,ನಮಗೆ ಇರೋದು ಒಂದೋ, ಎರಡೋ ಅಷ್ಟೇ. ಈ ಬಗ್ಗೆ ಹಿಂದುಗಳು ಮನೆಯಲ್ಲಿ ಕುಳಿತು ಯೋಚನೆ ಮಾಡಬೇಕಾಗುತ್ತದೆ. ಒಂದು ವೇಳೆ ಭಾರತದಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಾದರೆ, ಹಿಂದುಗಳ ಪರಿಸ್ಥಿತಿ ಏನಾಗುತ್ತದೆ ಅನ್ನೋದರ ಬಗ್ಗೆ ಚಿಂತನೆ ನಡೆಸಬೇಕಿದೆ ಎಂದು ಅವರು ಹೇಳಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *