LATEST NEWS
ಕಾರ್ಕಳ : ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಸಾವನಪ್ಪಿದ ಸಂತೋಷ್
ಕಾರ್ಕಳ ಫೆಬ್ರವರಿ 26: ವಾಲಿಬಾಲ್ ಆಡುತ್ತಿದ್ದ ಸಂದರ್ಭ ಯುವಕನೋರ್ವ ಕುಸಿದು ಬಿದ್ದು ಸಾವನಪ್ಪಿದ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ನಡೆದಿದೆ.
ಮೃತರನ್ನು ಕುಕ್ಕಂದೂರು ಗ್ರಾಮದ ನಿವಾಸಿ ಸಂತೋಷ (34) ಎಂದು ಗುರುತಿಸಲಾಗಿದ್ದು. ಕಳೆದ 4 ವರ್ಷಗಳ ಹಿಂದೆ ಹೃದಯಾಘಾತವಾಗಿ ಚಿಕಿತ್ಸೆ ಪಡೆದುಕೊಂಡಿದ್ದರು ಎಂದು ಹೇಳಲಾಗಿದ್ದು, ನಿನ್ನೆ ಸಂಜೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ವಾಲಿಬಾಲ್ ಆಡುತ್ತಿರುವಾಗ ಮೈದಾನದಲ್ಲಿ ನಿಂತಿದ್ದ ಸಂತೋಷ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕಾರ್ಕಳ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
You must be logged in to post a comment Login