Connect with us

LATEST NEWS

ಕೃಷ್ಣ ಮಠದಲ್ಲಿ ಪ್ರಧಾನಿಗೆ ಭದ್ರತೆ ಇಲ್ಲ ಅಂದರೆ ಅದು ಜಿಲ್ಲೆಗೆ ಮಾಡಿದ ಅವಮಾನ – ಪ್ರಮೋದ್ ಮಧ್ವರಾಜ್

ಕೃಷ್ಣ ಮಠದಲ್ಲಿ ಪ್ರಧಾನಿಗೆ ಭದ್ರತೆ ಇಲ್ಲ ಅಂದರೆ ಅದು ಜಿಲ್ಲೆಗೆ ಮಾಡಿದ ಅವಮಾನ – ಪ್ರಮೋದ್ ಮಧ್ವರಾಜ್

ಉಡುಪಿ ಮೇ 3: ಉಡುಪಿಯ ಕೃಷ್ಣ ಮಠದಲ್ಲಿ ಭದ್ರತೆ ಇಲ್ಲ ಅಂದರೆ ಅದು ಉಡುಪಿ ಜನತೆಗೆ ಮಾಡಿದ ಅವಮಾನ ಎಂದು ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.

ಇಂದು ಉಡುಪಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಕೃಷ್ಣ ಮಠದಲ್ಲಿ ಪ್ರಧಾನಿಗೆ ಭದ್ರತೆ ಇಲ್ಲ ಎಂದರೆ ಶ್ರೀಕೃಷ್ಣನನ್ನೇ ಅವಮಾನಿಸಿದಂತೆ ಹೇಳಿದ ಅವರು ಕಾನೂನು ಸುವ್ಯವಸ್ಥೆಯಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ನಂಬರ್ ಒನ್ ಇದರ ಬಗ್ಗೆ ಸಂಸದರು ಹೆಮ್ಮೆಪಡಬೇಕು .ಶ್ರೀಕೃಷ್ಣನಷ್ಟು ಶಕ್ತಿಶಾಲಿ ದೇವರು ಯಾರಿದ್ದಾರೆ ಎಂದ ಅವರು ಶ್ರೀಕೃಷ್ಣನ ಆಶೀರ್ವಾದದಿಂದ ನನಗೆ ಮೂರು ಬಾರಿ ಭಡ್ತಿ ಸಿಕ್ಕಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಕೃಷ್ಣ ಮಠಕ್ಕೆ ಭೇಟಿ ನೀಡದೆ ಇರುವುದಕ್ಕೆ ಈ ರೀತಿ ಸಬೂಬು ನೀಡೋದು ಸರಿಯಲ್ಲ. ಒಂದು ಸಮಯದಲ್ಲಿ ಸಿದ್ದರಾಮಯ್ಯ ಬಂದಿಲ್ಲ ಎಂದು ಬಿಜೆಪಿಯವರು ಬೊಬ್ಬೆ ಹಾಕುತ್ತಿದ್ದರು, ಪ್ರಧಾನ ಮಂತ್ರಿ ಬರುವುದಿಲ್ಲ ಎಂದು ಗೊತ್ತಾದ ಮೇಲೆ ನಾಟಕ ಮಾಡಿದ್ದು ಯಾಕೆ?. ಪೂಜೆ ಸ್ಥಗಿತ ಮಾಡಿ ಭಕ್ತರಿಗೆ ತಡೆದಿದ್ದೇಕೆ? ಪ್ರಧಾನಿ ಭೇಟಿ ನೀಡ್ತಾರೆ ಅಂತಾ ಸುಳ್ಳು ಸುದ್ದಿ ಹಬ್ಬಿಸಿ ಈಗ ಈ ರೀತಿ ಹೇಳಿಕೆ ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದರು.

ಉಡುಪಿ ಚಿಕ್ಕಮಗಳೂರು ಸಂಸದೆ ಅವರಿಗೆ ತಮ್ಮ ಲೋಕಸಭೆ ಕ್ಷೇತ್ರ ಯಾವುದು ಅಂತಾನೇ ಗೊತ್ತಿರಲಿಕ್ಕಿಲ್ಲ. ಹಾಗಾಗಿ ಅವರು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಇಡೀ ರಾಜ್ಯ ಸುತ್ತಾಡೋದ್ರಿಂದ ತನ್ನ ಕ್ಷೇತ್ರ ಮರೆತು ಹೋಗಿರಬಹುದು ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸಚಿವ ಪ್ರಮೋದ್ ಮಧ್ವರಾಜ್ ಲೇವಡಿ ಮಾಡಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *