Connect with us

DAKSHINA KANNADA

ಯಕ್ಷಗಾನದಲ್ಲಿ ಮೋದಿ ಹೆಸರು ಉಲ್ಲೇಖ : ಪಾತ್ರಧಾರಿ ಮೇಲೆ ಎಫ್ಐಆರ್ ದಾಖಲು

ಯಕ್ಷಗಾನದಲ್ಲಿ ಮೋದಿ ಹೆಸರು ಉಲ್ಲೇಖ : ಪಾತ್ರಧಾರಿ ಮೇಲೆ ಎಫ್ಐಆರ್ ದಾಖಲು

ಪುತ್ತೂರು, ಜನವರಿ 30 : ಯಕ್ಷಗಾನದ ಸಂಭಾಷಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹೆಸರು ಉಲ್ಲೇಖಿಸಿ ಸಂಭಾಷಣೆ ನಡೆಸಿದ್ದು ವಿವಾದಕ್ಕೆ ಕಾರಣವಾಗಿದೆ.ಛತ್ರಪತಿ ಶಿವಾಜಿ ಮಹಾರಾಜನ ಕಥೆಯುಳ್ಳ ಪ್ರಸಂಗದ ಯಕ್ಷಗಾನ ನಡೀತಿದ್ದಾಗ ಶಿವಾಜಿಯ ಗುರು ಸಮರ್ಥ ರಾಮದಾಸನ ಪಾತ್ರ ಮಾಡಿದ್ದ ಕಲಾವಿದ ಗಣರಾಜ ಭಟ್ ಬಡೆಕ್ಕಿಲ, ಭಾರತದ ಸ್ವಚ್ಛತೆಗಾಗಿ ನರೇಂದ್ರನಂತೆ ನೀನು ಕೇಸರಿಯ ತಂಡ ಕಟ್ಟಬೇಕು. ರಾತ್ರಿ ವೇಳೆ ಗೋವುಗಳನ್ನು ಕದ್ದೊಯ್ಯುವ ದುಷ್ಟರನ್ನು ಸದೆಬಡಿಯಲು ಜಾಗರಣ ನಿಲ್ಲುವಂತೆ ತರುಣ ಪಡೆಯನ್ನು ಜಾಗರಣ ವೇದಿಕೆಯ ರೂಪದಲ್ಲಿ ಕಟ್ಟಬೇಕಿದೆ ಅನ್ನುವ ಉಪದೇಶವನ್ನು ಶಿವಾಜಿಗೆ ಹೇಳುತ್ತಾರೆ.

ಕಥೆಯ ರೂಪವನ್ನು ಈಗಿನ ರಾಜಕೀಯ ಸನ್ನಿವೇಶಕ್ಕೆ ತಕ್ಕಂತೆ ಬದಲಿಸಿಕೊಂಡು ಪ್ರಧಾನಿ ಮತ್ತು ಹಿಂದು ಸಂಘಟನೆಯ ಹೆಸರು ಹೇಳಿದ್ದು ಬಿಜೆಪಿ ವಿರೋಧಿಗಳ ಕಣ್ಣು ಕೆಂಪಾಗಿಸಿದ್ದು ಕಾಂಗ್ರೆಸಿಗರಿಂದ ಆಕ್ಷೇಪ ಕೇಳಿಬಂದಿದೆ.

ಹೀಗಾಗಿ ಈ ವಿಡಿಯೋ ವೈರಲ್ ಆಗಿದ್ದು ಜಾಲತಾಣದಲ್ಲಿ ಪರ – ವಿರೋಧ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಮಾಜಿ ಸಚಿವ ರಮಾನಾಥ ರೈ ದಕ್ಷಿಣ ಕನ್ನಡ ಎಸ್ಪಿಗೆ ಫೋನ್ ಮಾಡಿ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಆದರೆ, ಲಿಖಿತವಾಗಿ ಯಾವುದೇ ದೂರು ಸಲ್ಲಿಸಿಲ್ಲ. ಇದನ್ನೇ ನೆಪ ಮಾಡಿಕೊಂಡ ಪುತ್ತೂರು ಠಾಣೆ ಪೊಲೀಸರು ಕಲಾವಿದ ಗಣರಾಜ ಭಟ್ಟರನ್ನು ಠಾಣೆಗೆ ಕರೆಸಿ, ಮುಚ್ಚಳಿಕೆ ಬರೆಸಿದ್ದಾರೆ.

ಈ ಯಕ್ಷಗಾನ ಕೆಲವು ದಿನಗಳ ಹಿಂದೆ ಪುತ್ತೂರು ತಾಲೂಕಿನ ದೇಂತಡ್ಕದಲ್ಲಿ ನಡೆದಿತ್ತು. ಇದೀಗ ರಮಾನಾಥ ರೈಯ ಫೋನ್ ಕರೆಯ ಮಾತ್ರಕ್ಕೆ ಪೊಲೀಸರು ಕಲಾವಿದನನ್ನು ಠಾಣೆಗೆ ಕರೆಸಿ, ವಿಚಾರಣೆ ನಡೆಸಿದ್ದು ಹಿಂದು ಸಂಘಟನೆ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *