Connect with us

    FILM

    ಅಪ್ಪು ಗಂಧದಗುಡಿ ಟ್ರೈಲರ್ ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

    ಬೆಂಗಳೂರು ಅಕ್ಟೋಬರ್ 09: ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಕೊನೆಯದಾಗಿ ಕಾಣಿಸಿಕೊಂಡ ಬಹುನಿರೀಕ್ಷಿತ ಗಂಧದ ಗುಡಿ ಟ್ರೈಲರ್ ಇಂದು ಬಿಡುಗಡೆಯಾಗಿದೆ. ಗಂಧದ ಗುಡಿ ಟ್ರೈಲರ್ ಗೆ ಪ್ರಧಾನಿ ನರೇಂದ್ರ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

    ಗಂಧದ ಗುಡಿ ಒಂದ ಸಾಕ್ಷ್ಯಾಚಿತ್ರವಾಗಿದ್ದು, ಪುನೀತ್ ಅವರ ಒಂದು ಅದ್ಭುತ ಕನಸಾಗಿದೆ. ಈ ಸಾಕ್ಷ್ಯಾಚಿತ್ರದಲ್ಲಿ ಕರ್ನಾಟಕದ ಅರಣ್ಯಗಳು ಹಾಗೂ ವನ್ಯಜೀವಿ ಪ್ರಪಂಚದ ಅದ್ಭುತ ದೃಶ್ಯವೈಭವವಿದೆ. ಇದಕ್ಕಾಗಿ ಪುನೀತ್​ ಇಡೀ ಕರುನಾಡನ್ನು ಸುತ್ತಿದ್ದರು. ಇದು ಅಪ್ಪು ಕಟ್ಟ ಕಡೆಯದಾಗಿ ಕಾಣಿಕೊಳ್ಳುವ ಸಿನಿಮಾ ಆಗಿರಲಿದೆ. ಗಂಧದ ಗುಡಿ ಟ್ರೈಲರ್ ಅನ್ನು ಅಭಿಮಾನಿಗಳ ನಡುವೆ ಅಶ್ವಿನಿ ಪುನೀತ್ ರಾಜ್​ಕುಮಾರ್​ ಅವರು ನರ್ತಕಿ ಥಿಯೇಟರ್​ನಲ್ಲಿ ಬಿಡುಗಡೆ ಮಾಡಿದರು. ಟ್ರೈಲರ್​ ನೋಡಿ ಅಭಿಮಾನಿಗಳಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.


    ಈ ಚಿತ್ರದ ಟ್ರೈಲರ್ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅಪ್ಪು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಹೃದಯದಲ್ಲಿ ವಾಸಿಸುತ್ತಿದ್ದಾರೆ. ಅವರು ತೇಜಸ್ಸಿನ ವ್ಯಕ್ತಿಯಾಗಿದ್ದರು, #ಗಂಧದಗುಡಿ ಚಿತ್ರ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಮತ್ತು ಪರಿಸರ ಸಂರಕ್ಷಣೆಗೆ ಗೌರವವಾಗಿದೆ. ಈ ಪ್ರಯತ್ನಕ್ಕೆ ನನ್ನ ಶುಭಾಶಯಗಳು. ಎಂದು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply