Connect with us

LATEST NEWS

ಮಂಗಳೂರು – ಪ್ರಧಾನಿ ನರೇಂದ್ರ ಮೋದಿ ರೋಡ್ ಶೋಗೆ ಭರದ ಸಿದ್ದತೆ

ಮಂಗಳೂರು ಎಪ್ರಿಲ್ 13 : ರವಿವಾರದಂದು ಮಂಗಳೂರು ನಗರದಲ್ಲಿ ನಡೆಯಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ರೋಡ್ ಶೋ ಗೆ ಸಿದ್ದತೆಗಳು ಭರದಿಂದ ಸಾಗುತ್ತಿದ್ದು ಲೇಡಿಹಿಲ್ ನಿಂದ ನವಭಾರತ್ ಸರ್ಕಲ್ ವರೆಗೆ ಕಬ್ಬಿಣದ ತಡಬೇಲಿ ಹಾಕುವ ಕೆಲಸ ನಡೆಯುತ್ತಿದೆ.


ರೋಡ್ ಶೋ ಆರಂಭಗೊಳ್ಳುವ ಬ್ರಹ್ಮಶ್ರೀ ನಾರಾಯಣ ಗುರು ವೃತ್ತವನ್ನು ಅಲಂಕರಿಸುವ ಕಾರ್ಯಗಳು, ವಿದ್ಯುತ್ ದೀಪ ಅಳವಡಿಕೆ ಮೊದಲಾದವುಗಳು ಯುದ್ದೋಪಾದಿಯಲ್ಲಿ ಸಾಗುತ್ತಿದೆ. ಸಂಚಾರಿ ಪೊಲೀಸರು ಸಂಚಾರ ಬದಲಾವಣೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.


ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಸಮಯದಲ್ಲಿ ಬದಲಾವಣೆಯಾಗಿದ್ದು, ಏಪ್ರಿಲ್ 14ರಂದು ಸಂಜೆ 7.45ಕ್ಕೆ ರೋಡ್ ಶೋ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಚುನಾವಣಾ ಸಂಚಾಲಕ ವಿ. ಸುನಿಲ್ ಕುಮಾರ್ ಹೇಳಿದರು.
ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ‌ ಅವರ ಸ್ವಾಗತಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಸಜ್ಜುಗೊಂಡಿದೆ. ಮೋದಿ ಅವರು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 7.30ಕ್ಕೆ ಬಂದು ಅಲ್ಲಿಂದ ವಾಹನದಲ್ಲಿ ನಾರಾಯಣ ಗುರು ವೃತ್ತಕ್ಕೆ ಬರಲಿದ್ದಾರೆ.‌

ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ರೋಡ್ ಶೋ ಆರಂಭವಾಗಲಿದೆ. ಲಾಲ್ ಬಾಗ್, ಬಳ್ಳಾಲ್ ಬಾಗ್, ಪಿವಿಎಸ್ ವೃತ್ತದ ಮಾರ್ಗವಾಗಿ ನವ ಭಾರತ್ ವೃತ್ತದಲ್ಲಿ ರೋಡ್ ಶೋ ಕೊನೆಗೊಳ್ಳಲಿದೆ.‌ ಸಾರ್ವಜನಿಕರು, ಕಾರ್ಯಕರ್ತರು, ಸಂಜೆ 6.30 ರ ಒಳಗಾಗಿ ರಸ್ತೆಯ ಇಕ್ಕೆಲಗಳಲ್ಲಿ ಬಂದು ನಿಂತಿರಬೇಕು ಎಂದು ವಿನಂತಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *