Connect with us

    BELTHANGADI

    ಮಗುವಿನೊಂದಿಗೆ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಗಂಭೀರ ಸ್ಥಿತಿಯಲ್ಲಿ ಅಸ್ಪತ್ರೆಗೆ ದಾಖಲು

    ಬೆಳ್ತಂಗಡಿ ನವೆಂಬರ್ 3: ಕೃಷಿಕ ದಂಪತಿಯೊಬ್ಬರು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.


    ಕೊಕ್ರಾಡಿಯ ಅತ್ರಿಜಾಲು ಸಮೀಪದ ಮನೆಯೊಂದರಲ್ಲಿ ವಾಸ್ತವ್ಯವಿದ್ದ ಚಂದ್ರಶೇಖರ ಶೆಟ್ಟಿಗಾರ್ ಅವರ ಪತ್ನಿ ಆಶಾ ತಮ್ಮ 5 ವರ್ಷ ಪ್ರಾಯದ ಮಗುವಿನೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಿಂದ ಈ ಮೂವರ ಸ್ಥಿತಿಯೂ ಚಿಂತಾಜನಕವಾಗಿದೆ. ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಪ್ರಗತಿಪರ ಕೃಷಿಕರಾಗಿದ್ದು, ಆರ್ಥಿಕವಾಗಿ ಸಧೃಢರಾಗಿದ್ದರು. ಯಾವುದೋ ಕೌಟುಂಬಿಕ ಕಲಹದಿಂದ ಈ ಕೃತ್ಯವೆಸಗಿರಬಹುದು ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply