DAKSHINA KANNADA
ಬಿಜೆಪಿ ಕಾರ್ಯಕರ್ತನ ಮನೆಗೆ ನುಗ್ಗಿ ದಾಂಧಲೆ ಪ್ರಕರಣ – 8 ಮಂದಿ ಕಾಂಗ್ರೇಸ್ ಬೆಂಬಲಿಗರು ಅರೆಸ್ಟ್
ಪುತ್ತೂರು ಮಾರ್ಚ್ 18: ಬಿಜೆಪಿ ಸಾಮಾಜಿಕ ಜಾಲತಾಣ ಪ್ರಮುಖ್ ಜಯಾನಂದ.ಕೆ. ಮನೆಗೆ ನುಗ್ಗಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಕಾಂಗ್ರೆಸ್ ಶಾಸಕ ಅಶೋಕ್ ರೈ ಬೆಂಬಲಿಗರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತರನ್ನು ಕಡಬ ತಾಲೂಕಿನ ಪಾರ್ತಾಜೆ ನಿವಾಸಿ ಪ್ರಜ್ವಲ್ ರೈ(34), ವಿಟ್ಲ ಕಂಬಳಬೆಟ್ಟು ನಿವಾಸಿ ಸುಶಾಂತ್ ಶೆಟ್ಟಿ(31), ಪುತ್ತೂರಿನ ಆರ್ಯಾಪು ನಿವಾಸಿ ಸನತ್ ರೈ(31), ಬಲ್ನಾಡು ನಿವಾಸಿ ರೋಹಿತ್ ನಾಯ್ಕ್(26), ಸಾಮೆತಡ್ಕ ನಿವಾಸಿ ಅಖಿಲ್(28), ಆರ್ಯಾಪು ನಿವಾಸಿ ಕೀರ್ತನ್ ರೈ(26), ಸರ್ವೇಶ್ ರಾಜ್ ಅರಸ್(24), ಸುಮಿತ್ ಶೆಟ್ಟಿ(29) ಎಂದು ಗುರುತಿಸಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಸಾವಿರ ಕೋಟಿ ರೂ ಅನುದಾನ ತಂದಿದ್ದಲ್ಲಿ ಬಹಿರಂಗ ಪಡಿಸಲಿ ಎಂದು ಬಿಜೆಪಿ ಕಾರ್ಯಕರ್ತರು ಪ್ರಶ್ನೆ ಹಾಕಿದ್ದರು, ಇದೇ ವಿಚಾರಕ್ಕೆ ನಿನ್ನೆ ತಾರಿಗುಡ್ಡೆಯಲ್ಲಿರುವ ಜಯಾನಂದ್ ಕೆ. ಅವರ ಮನೆಗೆ ಶಾಸಕ ಅಶೋಕ್ ರೈ ಬೆಂಬಲಿಗರೆನ್ನಲಾದ ಯುವಕರು ನುಗ್ಗಿ ಬಿಜೆಪಿಯ ಜಯಾನಂದ್ ಕೆ ಅವರಿಗೆ ಅವ್ಯಾಚ್ಯವಾಗಿ ನಿಂದಿಸಿ, ಜೀವಬೆದರಿಕೆಯೊಡ್ಡಿದ್ದರು. ಇದೀಗ ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದ ಎಂಟು ಜನರನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
You must be logged in to post a comment Login