LATEST NEWS
ಕರ್ಪ್ಯೂ ಉಲ್ಲಂಘಿಸಿ ಪ್ರತಿಭಟನೆ ಕೇರಳ ಸಂಸದನ ವಶಕ್ಕೆ ಪಡೆದ ಪೊಲೀಸರು
ಕರ್ಪ್ಯೂ ಉಲ್ಲಂಘಿಸಿ ಪ್ರತಿಭಟನೆ ಕೇರಳ ಸಂಸದನ ವಶಕ್ಕೆ ಪಡೆದ ಪೊಲೀಸರು
ಮಂಗಳೂರು ಡಿಸೆಂಬರ್ 21: ಕರ್ಪ್ಯೂ ಉಲ್ಲಂಘಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ಕೇರಳದ ಸಿಪಿಐ ರಾಜ್ಯಸಭಾ ಸದಸ್ಯ ಬಿನೊಯ್ ವಿಶ್ವಂ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ಗುರುವಾರ ನಡೆದ ಹಿಂಸಾಚಾರ ಖಂಡಿಸಿ ಸಿಪಿಐ ಮುಖಂಡರು ಮಂಗಳೂರಿನ ಮಹಾನಗರಪಾಲಿಕೆಯ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. ಕರ್ಪ್ಯೂ ಇದ್ದರೂ ಪ್ರತಿಭಟನೆ ನಡೆಸಿದ ಪರಿಣಾಮ ಪೊಲೀಸರು ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಸಿಪಿಐ ರಾಜ್ಯಸಭಾ ಸದಸ್ಯ ಬಿನೋಯ್ ವಿಶ್ವಂ ಸೇರಿದಂತೆ 6 ಮಂದಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.
You must be logged in to post a comment Login