Connect with us

LATEST NEWS

ಕೊರಗಜ್ಜನ ಗುಡಿಯಲ್ಲಿ ಕಾಂಡೋಮ್ ಇಟ್ಟ ಆರೋಪಿ ಆರೆಸ್ಟ್…!!

ಮಂಗಳೂರು ಡಿಸೆಂಬರ್ 29: ಮಂಗಳೂರು ದೈವಸ್ಥಾನ ಮಸೀದಿ ಮತ್ತು ಇತರ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಿದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.


ಬಂಧಿತ ಆರೋಪಿಯನ್ನು ಕೋಟೆಕಾರು ಕೊಂಡಾಣ ನಿವಾಸಿ ದೇವದಾಸ್ ದೇಸಾಯಿ(62) ಎಂದು ಗುರುತಿಸಲಾಗಿದ್ದು, ಆರೋಪಿ ನಂದಿಗುಡ್ಡೆಯಲ್ಲಿರುವ ಕೊರಗಜ್ಜ ದೈವಸ್ಥಾನದ ಕಟ್ಟೆಯ ಮೇಲೆ ಡಿಸೆಂಬರ್ 28ರಂದು ಕಾಂಡೋಮ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಸಿಸಿಟಿವಿ ಆಧಾರದ ಮೇಲೆ ಪೊಲೀಸರು ಈತನನ್ನು ಬಂಧಿಸಿದಾಗ ಈ ರೀತಿಯ 18 ಕೃತ್ಯಗಳು ಬೆಳಕಿಗೆ ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ


ಬಂಧಿತ ಆರೋಪಿ ದೇವದಾಸ್ ದೇಸಾಯಿ ಮೂಲತಃ ಹುಬ್ಬಳ್ಳಿ ನಿವಾಸಿಯಾಗಿದ್ದು, ಕಳೆದ 24 ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Click to comment

You must be logged in to post a comment Login

Leave a Reply