BANTWAL
ಮಿತ್ತಬೈಲು ಮಸೀದಿ ನುಗ್ಗಿ ಹತ್ಯೆ ಬೆದರಿಕೆ ಆರೋಪಿ ಪೊಲೀಸ್ ವಶಕ್ಕೆ
ಬಂಟ್ವಾಳ: ಮಾರಕಾಸ್ತ್ರಗಳೊಂದಿಗೆ ಮಸೀದಿಗೆ ನುಗ್ಗಲು ಯತ್ನಿಸಿದ್ದ ವ್ಯಕ್ತಿಯೊಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬಿ.ಸಿ.ರೋಡು ಬಳಿಯ ಮಿತ್ತಬೈಲು ಕೇಂದ್ರ ಜುಮಾ ಮಸೀದಿಯಲ್ಲಿ ನಡೆದಿದೆ.
ಆರೋಪಿಯನ್ನು ಬಾಬು ಪೂಜಾರಿ (60) ಎಂದು ಗುರುತಿಸಲಾಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಆತ ರಾತ್ರಿ ಮಸೀದಿಯ ಬಳಿ ದ್ವಿಚಕ್ರ ವಾಹನವನ್ನಿಟ್ಟು ಅಕ್ರಮವಾಗಿ ಮಸೀದಿಯೊಳಗೆ ನುಗ್ಗಿದ್ದಾನೆ. ಈ ವೇಳೆ ಮಸೀದಿಯ ಗುರುಗಳು ಆತನನ್ನು ವಿಚಾರಿಸಿದಾಗ, ನಾನು ಮಸೀದಿಯ ಗುರುಗಳನ್ನು ಹತ್ಯೆ ಮಾಡಲು ಬಂದಿದ್ದು, ಹತ್ಯೆ ಮಾಡುತ್ತೇನೆ, ನನ್ನನ್ನು ನೀವು ಏನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾನೆ ಎಂದು ಹೇಳಲಾಗಿದೆ. ಆತನ ಸ್ಕೂಟರ್ ನಲ್ಲಿ ಚೂರಿಯೊಂದನ್ನು ತೆಗೆದುಕೊಂಡು ಬಂದಿದ್ದ.
You must be logged in to post a comment Login