Connect with us

    LATEST NEWS

    ಟೈಲರ್‌ ಶಿರಚ್ಛೇದನ ಮಾಡಿದ ಹಂತಕರನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

    ರಾಜಸ್ಥಾನ : ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ರಾಜಸ್ಥಾನದ ಉದಯಪುರದ ಟೈಲರ್ ಹತ್ಯೆಯ ಹಂತಕರನ್ನು ಪೊಲೀಸರು ಘಟನೆ ನಡೆದ ಕಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ.


    ನೂಪರ್‌ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿ ವಾಟ್ಸಪ್‌ ಸ್ಟೇಟಸ್‌ ಹಾಕಿದ್ದಕ್ಕೆ ಇಬ್ಬರು ಮುಸ್ಲಿಂ ಮೂಲಭೂತವಾದಿ ಯುವಕರು ಟೈಲರ್‌ ಒಬ್ಬರನ್ನು ಬರ್ಬರವಾಗಿ ಶಿರಚ್ಛೇದ ಮಾಡಿದ ವೀಡಿಯೋವನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಮಧ್ಯಾಹ್ನ 2:30ರ ವೇಳೆಗೆ ಈ ಘಟನೆ ನಡೆದಿತ್ತು. ಸಂಜೆ ವೇಳೆಗೆ ಇಬ್ಬರೂ ಆರೋಪಿಗಳನ್ನು ರಾಜಾಸ್ಥಾನದಲ್ಲಿ ಬಂಧಿಸಲಾಗಿದೆ. ಈ ಇಬ್ಬರು ದುಷ್ಕರ್ಮಿಗಳನ್ನು ರಾಜಸಮಂದ್ ನಿಂದ ಬಂಧಿಸಲಾಗಿದೆ.


    ಉದಯಪುರ ಜಿಲ್ಲೆಯಲ್ಲಿ ಮುಂದಿನ 24 ಗಂಟೆಗಳ ಕಾಲ ಅಂತರ್ಜಾಲ ಸೇವೆ ಸ್ಥಗಿತಗೊಳಿಸಿ ಮಂಗಳವಾರ ಸಂಜೆಯೇ ಆದೇಶ ಹೊರಡಿಸಲಾತ್ತು. ಜತೆಗೆ, ಇಂಟರ್‌ನೆಟ್ ಸೇವೆಯನ್ನೂ ನಿರ್ಬಂಧಿಸಲಾಗಿತ್ತು. ಇದೀಗ ಜಿಲ್ಲೆಯ 7 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಹೇರಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply