KARNATAKA
ಮಂಗಳೂರು – ಕರ್ತವ್ಯದಲ್ಲಿರುವಾಗಲೇ ಹೃದಯಾಘಾತಕ್ಕೆ ಬಲಿಯಾದ ಎಎಸ್ಐ ರಾಜೇಶ್..!
ಮಂಗಳೂರು ಸೆಪ್ಟೆಂಬರ್ 16: ಕರ್ತವ್ಯದಲ್ಲಿರುವುಗಾಲೇ ಗುಪ್ತಚರ ಇಲಾಖೆಯ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಉರ್ವ ಗುಪ್ತಚರ ಇಲಾಖೆಯ ಕಚೇರಿಯಲ್ಲಿ ನಡೆದಿದೆ.
ಮೃತರನ್ನು ಉರ್ವಮಾರಿಗುಡಿ ನಿವಾಸಿ ರಾಜೇಶ್ ಬಿ.ಯು (45) ಎಂದು ಗುರುತಿಸಲಾಗಿದೆ. ಇವರು ಇಂದು ಮಧ್ಯಾಹ್ನ ಉರ್ವ ಗುಪ್ತಚರ ಇಲಾಖೆಯ ಕಚೇರಿಯಲ್ಲಿ ಕೆಲಸದಲ್ಲಿರುವಾಗಲೇ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ರೆಸ್ಟ್ ರೂಂ ಗೆ ತೆರಳಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವಾಗಲೇ ರಾಜೇಶ್ ಕುಸಿದು ಬಿದ್ದಿದ್ದು, ಹೃದಯಾಘಾತದಿಂದ ನಿಧನರಾಗಿದ್ದಾರೆ.
You must be logged in to post a comment Login