Connect with us

DAKSHINA KANNADA

ಬೆಳ್ಳಾರೆ ಪೊಲೀಸರಿಂದ ಯುವಕನ ಬಟ್ಟೆ ಬಿಚ್ಚಿಸಿ ಹಲ್ಲೆ ಆರೋಪ.. ವಿಡಿಯೋ ಮೂಲಕ ನ್ಯಾಯ ಕೊಡಿಸಿ ಎಂದ ಯುವಕ

ಸುಳ್ಯ: ಬೆಳ್ಳಾರೆ ಪೊಲೀಸರು ಯುವಕನೊಬ್ಬನಿಗೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಹಲ್ಲೆಗೊಳಗಾದ ವಿಡಿಯೋ ಮೂಲಕ ಆರೋಪ ಮಾಡಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ.


ಸುಳ್ಯ ತಾಲೂಕಿನ ಪಾಲ್ತಾಡಿ ಸಮೀಪದ ಮಣಿಕ್ಕರ ಕೊಡ್ಯಕ್ಕ ನಿವಾಸಿ ಅಜಿತ್.ಎಸ್ ಎಂಬ ಯುವಕನನ್ನು ಬೆಳ್ಳಾರೆ ಪೊಲೀಸ್ ಠಾಣೆಯ ಸಿಬ್ಬಂದಿ ಬಾಲು ಮತ್ತು ಇನ್ನೋರ್ವ ಸುಳ್ಳು ಪ್ರಕರಣವೊಂದರ ವಿಚಾರಣೆಗೆ ಕರೆದುಕೊಂಡು ಹೋಗಿದ್ದು, ನಂತರ ಠಾಣೆಯಲ್ಲಿ ವಿಚಾರಣೆ ನೆಪದಲ್ಲಿ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಠಾಣೆಯಲ್ಲಿ ಆ ದಿನದ ಸಿಸಿ ಕ್ಯಾಮರಾ ಪರಿಶೀಲಿಸಿದರೆ ಉನ್ನತ ಮಟ್ಟದ ಅಧಿಕಾರಿಗಳಿಗೆ ತಿಳಿಯಬಹುದು ಎಂದು ಅಜಿತ್ ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ.


ಪೊಲೀಸರ ಈ ನಡೆಗೆ ಸಾರ್ವಜನಿಕ ವಲಯದಿಂದ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಈ ಕುರಿತು ತಕ್ಷಣವೇ ತನಿಖೆ ನಡೆಸಬೇಕೆಂಬ ಮಾತುಗಳು ಕೇಳಿ ಬಂದಿವೆ.

https://youtu.be/o1-IPjIofYQ

Share Information
Continue Reading
Advertisement
Click to comment

Leave a Reply

Your email address will not be published. Required fields are marked *