LATEST NEWS
ಉಡುಪಿ ದುರ್ಗಾದೌಡ್ ಆಯೋಜಕರ ವಿರುದ್ದ ಪ್ರಕರಣ ದಾಖಲು
ಉಡುಪಿ ಅಕ್ಟೋಬರ್ 17: ವಿಜಯದಶಮಿಯಂದು ಉಡುಪಿಯಲ್ಲಿ ಆಯೋಜಿಸಿದ್ದ ದುರ್ಗಾ ದೌಡ್ ಕಾರ್ಯಕದ್ರಮದ ಆಯೋಜಕರ ವಿರುದ್ದ ಉಡುಪಿಯಲ್ಲಿ ಕೊರೊನಾ ನಿಯಮ ಉಲ್ಲಂಘಿಸಿದ ಹಿನ್ನಲೆ ಎಪಿಡೆಮಿಕ್ ಆಕ್ಟ್ ಪ್ರಕಾರ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಉುಡುಪಿಯಲ್ಲಿ ಇದೇ ಮೊದಲ ಬಾರಿಗೆ ಹಿಂದೂ ಜಾಗರಣ ವೇದಿಕೆ ಆಯೋಜಿಸಿದ್ದ ದುರ್ಗಾದೌಡ್ ಕಾರ್ಯಕ್ರಮದಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು ಭಾಗವಿಸಿದ್ದರು. ಇದು ಕೋವಿಡ್ ಸೋಂಕು ತಡೆಗಟ್ಟುವ ಕುರಿತಾದ ಡಿ.ಸಿ ಆದೇಶ ಉಲ್ಲಂಘನೆ ಹಿನ್ನೆಲೆ ಉಡುಪಿ ನಗರದ ಪೌರಾಯುಕ್ತರ ದೂರಿನ ಮೇರೆಗೆ ನಗರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಯಾವುದೇ ಪೂರ್ವಾನುಮತಿ ಇಲ್ಲದೆ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ಆರೋಪಿಸಲಾಗಿದ್ದು, ಈ ಕಾರ್ಯಕ್ರಮದ ಮೆರವಣಿಗೆಯಲ್ಲಿ ಸಚಿವ ಸುನಿಲ್ ಕುಮಾರ್ ಹಾಗೂ ಶಾಸಕ ರಘುಪತಿ ಭಟ್ ಕೂಡ ಭಾಗವಹಿಸಿದ್ದರು.
You must be logged in to post a comment Login