Connect with us

    LATEST NEWS

    ಸಾಮಾಜಿಕ ಜಾಲತಾಣಗಳಲ್ಲಿ ದೈವಾರಾಧನೆಗೆ ಅವಮಾನ ಯುವ ತುಳುನಾಡ್ ಕುಡ್ಲ ದಿಂದ ದೂರು ದಾಖಲು..!

    ಮಂಗಳೂರು: ತುಳುನಾಡಿನ ನಂಬಿಕೆ ಎಂದೇ ಪರಿಗಣಿಸಲ್ಪಟ್ಟಿರುವ ದೈವಾರಾಧನೆಯನ್ನು ಚಿತ್ರವಿಚಿತ್ರ ರೀತಿಯಲ್ಲಿ ಬಿಂಬಿಸಿ, ಎಡಿಟ್ ಮಾಡಿ ಅಸಂಖ್ಯಾತ ದೈವ ಭಕ್ತರ ಧಾರ್ಮಿಕ ನಂಬಿಕೆಗಳಿಗೆ ನೋವು ಉಂಟು ಮಾಡುತ್ತಿರುವ ಘಟನೆಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿ ಬರುತ್ತಿದೆ.


    ಈ ಹಿನ್ನೆಲೆ ಯಲ್ಲಿ ಯುವ ತುಳುನಾಡ್ ® ಕುಡ್ಲ ಎಂಬ ಸಂಘಟನೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ಸಲ್ಲಿಸಿದೆ.ದೈವಗಳ ಫೊಟೋಗಳನ್ನು ಬಳಸಿ ಅಸಭ್ಯವಾಗಿ ಎಡಿಟ್ ಮಾಡುವುದು, ತಮ್ಮದೇ ಕಲ್ಪನೆಯಲ್ಲಿ ಚಿತ್ರವಿಚಿತ್ರ ಚಿತ್ರಗಳನ್ನು ಬಿಡಿಸುವುದು, ದೈವ ನರ್ತನಗಳ ವಿಡಿಯೋಗಳಿಗೆ ಸಿನಿಮಾ ಹಾಡುಗಳು, DJ ಹಾಡುಗಳನ್ನು ಹಾಕಿ ಎಡಿಟ್ ಮಾಡುವುದು, ವಿಚಿತ್ರ ಭಂಗಿಯಲ್ಲಿ ದೈವದ ಫೊಟೋ ತೆಗೆಯುವುದು, ಸಂಧಿ, ಪಾಡ್ದನ, ಬೀರಗಳಲ್ಲಿ ಇಲ್ಲದ ಕಥೆಕಟ್ಟಿ ಅದಕ್ಕೆ ತಕ್ಕುದಾದ ವಿಡಿಯೋಗಳನ್ನು ಮಾಡಿ ನಂಬಿಕೆಗೆ ನೋವುಂಟು ಮಾಡುವ ಕೃತ್ಯಗಳು ನಡೆಯುತ್ತಿವೆಂದು ಆರೋಪಿಸಲಾಗಿದೆ‌.

    ಈ ಎಲ್ಲಾ ಸಂಗತಿಗಳನ್ನು ಗಮನದಲ್ಲಿಟ್ಟುಕೊಂಡು ಅನೇಕ ಸಾಮಾಜಿಕ ಜಾಲತಾಣಗಳ ಪೇಜ್, ಗ್ರೂಪ್, ಖಾತೆಗಳ ಮೇಲೆ ದೂರು ಸಲ್ಲಿಸಲಾಗಿದೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಯುವ “ತುಳುನಾಡ್ ® ಕುಡ್ಲ” ಸಂಘಟನೆಯು ಮಂಗಳೂರು ನಗರ ಪೊಲೀಸ್ ಆಯುಕ್ತರು, ಜಿಲ್ಲಾ ಸೈಬರ್ ಕ್ರೈಮ್ ಸ್ಟೇಷನ್ ಹಾಗೂ ಮಂಗಳೂರು ನಗರದ ಪೊಲೀಸ್ ಠಾಣೆಗಳಲ್ಲಿ ದೂರು ಸಲ್ಲಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply