LATEST NEWS
ಪೊಲೀಸ್ ಠಾಣೆಯ ಸಮೀಪದಲ್ಲೇ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ
ಪೊಲೀಸ್ ಠಾಣೆಯ ಸಮೀಪದಲ್ಲೇ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ
ಉಡುಪಿ ಮೇ.29 : ಪೊಲೀಸ್ ಠಾಣೆಯ ಸಮೀಪದಲ್ಲೇ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತ ಪೊಲೀಸ್ ಸಿಬ್ಬಂದಿಯನ್ನು ಮಲ್ಲಿಕಾರ್ಜುನ್ ಗುಬ್ಬಿ ಎಂದು ಗುರುತಿಸಲಾಗಿದೆ. ಕೆಎಸ್ ಆರ್ ಪಿ( IRB) ಸಿಬ್ಬಂದಿಯಾಗಿರುವ ಕಲ್ಬುರ್ಗಿಯ ನೌರುಗಂಜ್ ನಿವಾಸಿ ಮಲ್ಲಿಕಾರ್ಜುನ್ ಗುಬ್ಬಿ, ಮೇ 16 ರಂದು ನಕ್ಸಲ್ ಪೀಡಿತ ಅಮಾಸೆಬೈಲು ಠಾಣೆಗೆ ಭದ್ರತೆಗಾಗಿ ನಿಯೋಜನೆಗೊಂಡಿದ್ದರು.
ಮೂರು ತಿಂಗಳ ಹಿಂದೆ ಅಷ್ಟೇ ಕೊಪ್ಪಳದ ಮುನಿರಾಬಾದ್ ಗೆ ವರ್ಗಾವಣೆಗೊಂಡಿದ್ದರು ಎಂದು ಹೇಳಲಾಗಿದೆ. ಠಾಣೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹ ಗಮನಿಸಿದ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅನಾರೋಗ್ಯದಿಂದ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.
You must be logged in to post a comment Login