Connect with us

    DAKSHINA KANNADA

    ಬಿಜೆಪಿ ಮಂಗಳೂರು ಚಲೋ ಕಾರ್ಯಕ್ರಮಕ್ಕೆ ಪೊಲೀಸರ ತಡೆ

    ಮಂಗಳೂರು, ಸೆಪ್ಟೆಂಬರ್ 04 : ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾ ಘಟಕ ಸೆಪ್ಟೆಂಬರ್ 7 ರಂದು ಆಯೋಜಿಸಿರುವ ಮಂಗಳೂರು ಚಲೋ ಬೈಕ್ ರಾಲಿ ಮಂಗಳೂರು ಪ್ರವೇಶಕ್ಕೆ ಪೋಲಿಸ್ ಆಯುಕ್ತರಾದ ಟಿ. ಆರ್. ಸುರೇಶ್ ಅನುಮತಿ ನಿರಾಕರಿಸಿದ್ದಾರೆ. ಈ ಬಗ್ಗೆ ಆಯುಕ್ತರು ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

    ಬಿಜೆಪಿ ಯುವ ಮೋರ್ಚಾ ಸೆಪ್ಟೆಂಬರ್ 5 ರಂದು ರಾಜ್ಯದ ಪ್ರಮುಖ 5 ವಿಭಾಗಳಿಂದ ಆರಂಭವಾಗಲಿದೆ. ಬೆಂಗಳೂರು, ಹುಬ್ಬಳ್ಳಿ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಮೈಸೂರಿನಿಂದ ಆರಂಭಗೊಂಡು, ಸೆಪ್ಟೆಂಬರ್ 6 ರಂದು ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶ ಮಾಡಲಿದೆ.

    ಸೆಪ್ಟೆಂಬರ್ 7 ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಆದರೆ ಈ ಕಾರ್ಯಕ್ರಮದಿಂದ ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಲಿದೆ, ಹಾಗೂ ನಗರದಲ್ಲಿ ಶಾಂತಿ ಕದಡುವ ಆತಂಕ ವಿರುವ ಹಿನ್ನೆಲೆಯಲ್ಲಿ ,ಬೈಕ್ ಜಾಥಾ ನಗರ ಪ್ರವೇಶಕ್ಕೆ ಮಂಗಳೂರು ಪೋಲಿಸ್ ಆಯುಕ್ತರು ನಿಷೇಧ ಹೇರಿದ್ದಾರೆ.

    ಸಂಸದ ನಳಿನ್ ಕುಮಾರ್ ಖಂಡನೆ

    ಮಂಗಳೂರು ನಗರ ಪೋಲಿಸರ ಈ ನಿರ್ಬಂಧಕ್ಕೆ ಜಿಲ್ಲಾ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದ್ದು, ಸಂಸದ ನಳೀನ್ ಕುಮಾರ್ ಕಟೀಲ್ ತೀವೃವಾಗಿ ಖಂಡಿಸಿದ್ದಾರೆ. ಈ ಬೈಕ್ ಜಾಥಾ ಯಾವುದೇ ಕಾರಣಕ್ಕೆ ನಿಲ್ಲುವುದಿಲ್ಲ, ಮಾಡಿಯೇ ತೀರುತ್ತೇವೆ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಸಂಸದರು ಹೇಳಿಕೆ ನೀಡಿದ್ದಾರೆ. ವಿವಿಧ ಕಡೆಗಳಿಂದ ಬರುವ ಈ ಬೈಕ್ ಜಾಥಾಕ್ಕೆ ಈಗಾಗಲೇ 10,000ಕ್ಕೂ ಅಧಿಕ ಕಾರ್ಯಕರ್ತರು ನೋಂದಣಿ ಮಾಡಿಕೊಂಡಿದ್ದಾರೆ. ಈಗಾಗಲೇ ಸಿದ್ದತೆಗಳು ಬಹುತೇಕ ಪೂರ್ಣಗೊಂಡಿವೆ.

    ಯಾವುದೇ ಕಾರಣಕ್ಕೂ ಬೈಕ್ ಜಾಥಾದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ, ತಾಕತ್ತಿದ್ದರೆ ಬೈಕ್ ಜಾಥಾವನ್ನು ತಡೆಯಲಿ ಎಂದು ಸವಾಲು ಹಾಕಿದ್ದಾರೆ. ಒಂದು ವೇಳೆ ರಾಜ್ಯ ಸರ್ಕಾರ ಪೋಲಿಸ್ ಇಲಾಖೆ ಮೂಲಕ ಬಲ ಪ್ರಯೋಗ ಮಾಡಿ ಜಾಥಾವನ್ನು ಹತ್ತಿಕ್ಕಲು ನೋಡಿದರೆ ಸಿದ್ದರಾಮಯ್ಯ ಅವರ ಸರ್ಕಾರವೇ ಅವರೇ ನೇರಾ ಹೊಣೆಯಾಗುತ್ತಾರೆ ಎಂದು ಎಚ್ಚರಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply