ಉಡುಪಿ: ಜಿಲ್ಲೆಯಲ್ಲಿ ಸಮಾಜವಿರೋಧಿ ಚಟುವಟಿಕೆಗಳನ್ನು ಹತ್ತಿಕ್ಕಲು ಮತ್ತು ಸಾರ್ವಜನಿಕ ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇಬ್ಬರು ರೌಡಿ-ಶೀಟರ್ಗಳನ್ನು ಜಿಲ್ಲೆಯಿಂದ ಹೊರಗಟ್ಟುವ (ಗಡಿಪಾರು) ಮಹತ್ವದ ಆದೇಶ ಹೊರಡಿಸಿದ್ದಾರೆ. ಏಪ್ರಿಲ್ 2ರಂದು ಹೊರಬಿದ್ದ ಈ ಆದೇಶದನ್ವಯ ಇಬ್ಬರು ಆರೋಪಿಗಳನ್ನು ನಿಗದಿತ ಅವಧಿಗೆ ಜಿಲ್ಲೆಗೆ ಪ್ರವೇಶಿಸದಂತೆ ನಿಷೇಧಿಸಲಾಗಿದೆ.

ಗಡಿಪಾರಾದವರ ವಿವರ: ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಉದ್ಯಾವರ ಪಿತ್ರೋಡಿ ನಿವಾಸಿ ವಿಜೇತಾ ಮತ್ತು ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಮುದರಂಗಡಿ ನಿವಾಸಿ ಆರಿಫ್ ಸಾಹೇಬ್ ಗಡಿಪಾರು ಶಿಕ್ಷೆಗೆ ಒಳಗಾದವರು. ವಿಜೇತಾ ವಿರುದ್ಧ ಕೊಲೆ ಯತ್ನ ಹಾಗೂ ಹಲ್ಲೆ ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಆತನನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ಗಡಿಪಾರು ಮಾಡಲಾಗಿದೆ.
ಬ್ಯೂಟಿಷಿಯನ್ಗೆ ಪ್ರಪೋಸ್ ಮಾಡಿದ ಸಲೂನ್ ಮಾಲೀಕ: ರೊಚ್ಚಿಗೆದ್ದು ದಾಳಿ ನಡೆಸಿದ ಪತಿ ಮತ್ತು ಗ್ಯಾಂಗ್!
ಮತ್ತೋರ್ವ ಆರೋಪಿ ಆರಿಫ್ ಸಾಹೇಬ್ ವಿರುದ್ಧ ಕೊಲೆ ಯತ್ನ, ಹಲ್ಲೆ ಹಾಗೂ ಮಾದಕ ದ್ರವ್ಯ ಸೇವನೆ ಸೇರಿದಂತೆ ಐದು ಗಂಭೀರ ಪ್ರಕರಣಗಳು ದಾಖಲಾಗಿದ್ದು, ಆತನನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪಕ್ಕೆ ಗಡಿಪಾರು ಮಾಡಲಾಗಿದೆ. “ಜಿಲ್ಲೆಯ ನಿವಾಸಿಗಳ ಸುರಕ್ಷತೆ ಮತ್ತು ಸಮಾಜವಿರೋಧಿ ಶಕ್ತಿಗಳ ನಿಗ್ರಹಕ್ಕಾಗಿ ಇಂತಹ ಕಠಿಣ ಕ್ರಮಗಳು ಅನಿವಾರ್ಯ” ಎಂದು ಪೊಲೀಸ್ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.